<p><strong>ಆಳಂದ:</strong> ಇಲ್ಲಿನ ಹೊಸ ಬಸ್ ನಿಲ್ದಾಣ ₹5 ಕೋಟಿ ಅನುದಾನದಲ್ಲಿ ನಿರ್ಮಾಣವಾಗುತ್ತಿದ್ದು, ಕಾಮಗಾರಿಯನ್ನು ಗುಣಮಟ್ಟದ ಜೊತೆಗೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಎಂದು ರಾಜ್ಯ ಯೋಜನಾ ಮತ್ತು ನೀತಿ ಆಯೋಗದ ಉಪಾಧ್ಯಕ್ಷ, ಶಾಸಕ ಬಿ.ಆರ್. ಪಾಟೀಲ ಹೇಳಿದರು.</p>.<p>ಪಟ್ಟಣದ ಬಸ್ ನಿಲ್ದಾಣದಲ್ಲಿ ಗುರುವಾರ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ನೂತನ ಎರಡು ನಗರ ಸಾರಿಗೆ ಬಸ್ ಸೇವೆಗಳಿಗೆ ಚಾಲನೆ ನೀಡಿ ಮಾತನಾಡಿದರು.</p>.<p>‘ಜನದಟ್ಟಣೆ ತಡೆ ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಬಸ್ ನಿಲ್ದಾಣ ನಿರ್ಮಾಣ ಹಂತದಲ್ಲಿದೆ. ಸಮೀಪದ ಎಪಿಎಂಸಿ ಜಾಗ ಪಡೆದು ವಿಶಾಲವಾದ ಬಸ್ ನಿಲ್ದಾಣ ಆವರಣ ಹಾಗೂ ಮೂಲಭೂತ ಸೌಕರ್ಯಗಳು ಪ್ರಯಾಣಿಕರಿಗೆ ದೊರೆಯಲಿವೆ’ ಎಂದರು.</p>.<p>ಆಳಂದ-ಕಲಬುರಗಿಗೆ ವಿಶೇಷವಾಗಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೆಚ್ಚಿನ ನಗರ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ವಾಗ್ದರಿ-ರಿಬ್ಬನಪಲ್ಲಿ ಮುಖ್ಯರಸ್ತೆಯ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿಗೆ ಬೇಡಿಕೆ ಇಡಲಾಗಿದೆ’ ಎಂದರು.</p>.<p>ಆಳಂದ ಬಸ್ ಘಟಕದ ವ್ಯವಸ್ಥಾಪಕ ಯೋಗಿರಾಜ್ ಸರಸಂಬಿ ಮಾತನಾಡಿ, ‘ನೂತನ 2 ನಗರ ಸಾರಿಗೆ ಬಸ್ಗಳು ಬೆಳಿಗ್ಗೆ 7 ರಿಂದ ಸಂಜೆ 7ರವರೆಗೆ ಆಳಂದ-ಕಲಬುರಗಿ ಮಾರ್ಗದಲ್ಲಿ ಸಂಚರಿಸಲಿವೆ. ಪ್ರಯಾಣಿಕರಿಗೆ ಸಾರಿಗೆ ನಿಗಮವು ಹೆಚ್ಚಿನ ಅನುಕೂಲ ಕಲ್ಪಿಸಿದೆ’ ಎಂದರು.</p>.<p>ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಶಿವಪುತ್ರಪ್ಪ ಪಾಟೀಲ, ಮಲ್ಲಪ್ಪ ಹತ್ತರಕಿ, ಧರ್ಮಾ ಬಂಗರಗಿ, ಬಿ.ಎಸ್ ಆಲೂರೆ, ಸಿದ್ದು ವೇದಶೆಟ್ಟಿ, ಮಹ್ಮದ್ ಖಾನ್, ಅಶೋಕ ಬಿಸಲೆ, ಪೀರಪ್ಪ ಪಾಟೀಲ, ರಾಜಕುಮಾರ ಚವ್ಹಾಣ, ಮಹೇಶ ಹಿರೋಳ್ಳಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಳಂದ:</strong> ಇಲ್ಲಿನ ಹೊಸ ಬಸ್ ನಿಲ್ದಾಣ ₹5 ಕೋಟಿ ಅನುದಾನದಲ್ಲಿ ನಿರ್ಮಾಣವಾಗುತ್ತಿದ್ದು, ಕಾಮಗಾರಿಯನ್ನು ಗುಣಮಟ್ಟದ ಜೊತೆಗೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಎಂದು ರಾಜ್ಯ ಯೋಜನಾ ಮತ್ತು ನೀತಿ ಆಯೋಗದ ಉಪಾಧ್ಯಕ್ಷ, ಶಾಸಕ ಬಿ.ಆರ್. ಪಾಟೀಲ ಹೇಳಿದರು.</p>.<p>ಪಟ್ಟಣದ ಬಸ್ ನಿಲ್ದಾಣದಲ್ಲಿ ಗುರುವಾರ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ನೂತನ ಎರಡು ನಗರ ಸಾರಿಗೆ ಬಸ್ ಸೇವೆಗಳಿಗೆ ಚಾಲನೆ ನೀಡಿ ಮಾತನಾಡಿದರು.</p>.<p>‘ಜನದಟ್ಟಣೆ ತಡೆ ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಬಸ್ ನಿಲ್ದಾಣ ನಿರ್ಮಾಣ ಹಂತದಲ್ಲಿದೆ. ಸಮೀಪದ ಎಪಿಎಂಸಿ ಜಾಗ ಪಡೆದು ವಿಶಾಲವಾದ ಬಸ್ ನಿಲ್ದಾಣ ಆವರಣ ಹಾಗೂ ಮೂಲಭೂತ ಸೌಕರ್ಯಗಳು ಪ್ರಯಾಣಿಕರಿಗೆ ದೊರೆಯಲಿವೆ’ ಎಂದರು.</p>.<p>ಆಳಂದ-ಕಲಬುರಗಿಗೆ ವಿಶೇಷವಾಗಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೆಚ್ಚಿನ ನಗರ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ವಾಗ್ದರಿ-ರಿಬ್ಬನಪಲ್ಲಿ ಮುಖ್ಯರಸ್ತೆಯ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿಗೆ ಬೇಡಿಕೆ ಇಡಲಾಗಿದೆ’ ಎಂದರು.</p>.<p>ಆಳಂದ ಬಸ್ ಘಟಕದ ವ್ಯವಸ್ಥಾಪಕ ಯೋಗಿರಾಜ್ ಸರಸಂಬಿ ಮಾತನಾಡಿ, ‘ನೂತನ 2 ನಗರ ಸಾರಿಗೆ ಬಸ್ಗಳು ಬೆಳಿಗ್ಗೆ 7 ರಿಂದ ಸಂಜೆ 7ರವರೆಗೆ ಆಳಂದ-ಕಲಬುರಗಿ ಮಾರ್ಗದಲ್ಲಿ ಸಂಚರಿಸಲಿವೆ. ಪ್ರಯಾಣಿಕರಿಗೆ ಸಾರಿಗೆ ನಿಗಮವು ಹೆಚ್ಚಿನ ಅನುಕೂಲ ಕಲ್ಪಿಸಿದೆ’ ಎಂದರು.</p>.<p>ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಶಿವಪುತ್ರಪ್ಪ ಪಾಟೀಲ, ಮಲ್ಲಪ್ಪ ಹತ್ತರಕಿ, ಧರ್ಮಾ ಬಂಗರಗಿ, ಬಿ.ಎಸ್ ಆಲೂರೆ, ಸಿದ್ದು ವೇದಶೆಟ್ಟಿ, ಮಹ್ಮದ್ ಖಾನ್, ಅಶೋಕ ಬಿಸಲೆ, ಪೀರಪ್ಪ ಪಾಟೀಲ, ರಾಜಕುಮಾರ ಚವ್ಹಾಣ, ಮಹೇಶ ಹಿರೋಳ್ಳಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>