<p>ಆಳಂದ: ಕರ್ತವ್ಯಲೋಪ ಮತ್ತು ಹಣಕಾಸಿನ ದುರಪಯೋಗ ಹಿನ್ನಲೆ ತಾಲ್ಲೂಕಿನ ನಿಂಬಾಳ ಗ್ರಾಮ ಪಂಚಾಯಿತಿ ಸದಸ್ಯೆ ಯಲ್ಲಾಬಾಯಿ ಮಲ್ಕಣ್ಣ ಹಾವಳೇಕರ್ ಅವರ ಸದಸ್ಯತ್ವವನ್ನು ರದ್ದು ಮಾಡಲಾಗಿದೆ. ಇವರು ಮುಂದಿನ ಆರು ವರ್ಷ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ.</p>.<p>ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಈ ಕುರಿತು ಆದೇಶ ನೀಡಿದ್ದಾರೆ.</p>.<p>ಯಲ್ಲಾಬಾಯಿ ಅವರು ಗ್ರಾ.ಪಂ. ಅಧ್ಯಕ್ಷೆಯಾಗಿದ್ದಾಗ ₹ 25 ಸಾವಿರ ಚೆಕ್ನ್ನು ಅವರ ಪತಿ ಮಲ್ಕಣ್ಣ ಹೆಸರಿನಲ್ಲಿ ಪಡೆದಿದ್ದರು. ಇದನ್ನು ಪ್ರಶ್ನಿಸಿದ್ದ ಗ್ರಾಮದ ರಾಜಕುಮಾರ ಘೂಳ ಎಂಬುವವರು 2022ರ ಜನವರಿ 18ರಂದು ಆಳಂದ ತಾ.ಪಂ ಇಒ, ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ದೂರು ನೀಡಿದ್ದರು.</p>.<p>ಈ ಸಂಬಂಧ 2022ರ ಮಾರ್ಚ್ 3ರಂದು ಪ್ರಾದೇಶಿಕ ಆಯುಕ್ತರು ಯಲ್ಲಾಬಾಯಿ ಹಾವಳೇಕರ್ ಅವರಿಗೆ ಕಾರಣ ಕೇಳಿ ನೋಟಿಸ್ ನೀಡಿದ್ದರು.</p>.<p>ಸುದೀರ್ಘ ವಿಚಾರಣೆ ಬಳಿಕ ಅರೆ ನ್ಯಾಯಿಕ ನ್ಯಾಯಾಲಯ ಯಲ್ಲಬಾಯಿ ಅವರನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 43(ಎ)(ವಿ)ನ್ನು ಉಲ್ಲಂಘಿಸಿದ್ದಾರೆ ಎಂದು ಅಭಿಪ್ರಾಯಪಟ್ಟು, ಅವರು ಗ್ರಾಮ ಪಂಚಾಯಿತಿ ಸದಸ್ಯತ್ವ ಸ್ಥಾನದಿಂದ ತೆಗೆದು ಹಾಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಆಳಂದ: ಕರ್ತವ್ಯಲೋಪ ಮತ್ತು ಹಣಕಾಸಿನ ದುರಪಯೋಗ ಹಿನ್ನಲೆ ತಾಲ್ಲೂಕಿನ ನಿಂಬಾಳ ಗ್ರಾಮ ಪಂಚಾಯಿತಿ ಸದಸ್ಯೆ ಯಲ್ಲಾಬಾಯಿ ಮಲ್ಕಣ್ಣ ಹಾವಳೇಕರ್ ಅವರ ಸದಸ್ಯತ್ವವನ್ನು ರದ್ದು ಮಾಡಲಾಗಿದೆ. ಇವರು ಮುಂದಿನ ಆರು ವರ್ಷ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ.</p>.<p>ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಈ ಕುರಿತು ಆದೇಶ ನೀಡಿದ್ದಾರೆ.</p>.<p>ಯಲ್ಲಾಬಾಯಿ ಅವರು ಗ್ರಾ.ಪಂ. ಅಧ್ಯಕ್ಷೆಯಾಗಿದ್ದಾಗ ₹ 25 ಸಾವಿರ ಚೆಕ್ನ್ನು ಅವರ ಪತಿ ಮಲ್ಕಣ್ಣ ಹೆಸರಿನಲ್ಲಿ ಪಡೆದಿದ್ದರು. ಇದನ್ನು ಪ್ರಶ್ನಿಸಿದ್ದ ಗ್ರಾಮದ ರಾಜಕುಮಾರ ಘೂಳ ಎಂಬುವವರು 2022ರ ಜನವರಿ 18ರಂದು ಆಳಂದ ತಾ.ಪಂ ಇಒ, ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ದೂರು ನೀಡಿದ್ದರು.</p>.<p>ಈ ಸಂಬಂಧ 2022ರ ಮಾರ್ಚ್ 3ರಂದು ಪ್ರಾದೇಶಿಕ ಆಯುಕ್ತರು ಯಲ್ಲಾಬಾಯಿ ಹಾವಳೇಕರ್ ಅವರಿಗೆ ಕಾರಣ ಕೇಳಿ ನೋಟಿಸ್ ನೀಡಿದ್ದರು.</p>.<p>ಸುದೀರ್ಘ ವಿಚಾರಣೆ ಬಳಿಕ ಅರೆ ನ್ಯಾಯಿಕ ನ್ಯಾಯಾಲಯ ಯಲ್ಲಬಾಯಿ ಅವರನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 43(ಎ)(ವಿ)ನ್ನು ಉಲ್ಲಂಘಿಸಿದ್ದಾರೆ ಎಂದು ಅಭಿಪ್ರಾಯಪಟ್ಟು, ಅವರು ಗ್ರಾಮ ಪಂಚಾಯಿತಿ ಸದಸ್ಯತ್ವ ಸ್ಥಾನದಿಂದ ತೆಗೆದು ಹಾಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>