‘2023ರ ಏ.29 ಪಟ್ಟಣದ ಸರ್ಕಾರಿ ಆದರ್ಶ ವಿದ್ಯಾಲಯ ಪರೀಕ್ಷೆ ಕೇಂದ್ರದಲ್ಲಿ ಪರೀಕ್ಷೆ ನಡೆದಿತ್ತು. ಅಂದಿನ ಪ್ರಭಾರ ಕ್ಷೇತ್ರ ಸಮನ್ವಯಾಧಿಕಾರಿ, ಪಡಸಾವಳಿ ಶಾಲೆ ಮುಖ್ಯ ಶಿಕ್ಷಕ ಬಸವರಾಜ ದೊಡ್ಡಮನಿ ಹಾಗೂ ಮೋಘಾ (ಕೆ) ಶಾಲೆಯ ಶಿಕ್ಷಕ ಪರಮೇಶ್ವರ ದುಲಂಗೆ ಸ್ಥಳೀಯ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದಾರೆ’ ಎಂದು ವಿದ್ಯಾರ್ಥಿಗಳ ಪಾಲಕರಾದ ದೇವೀಂದ್ರಪ್ಪ ಶವರೆ, ಅರ್ಜುನ ಇಂಗಳೆ ಮತ್ತಿತರರು ಕ್ಷೇತ್ರ ಶಿಕ್ಷಣಾಧಿಕಾರಿ, ಡಿಡಿಪಿಐ, ಹೆಚ್ಚುವರಿ ಆಯುಕ್ತರಿಗೆ ದೂರು ಸಲ್ಲಿಸಿದ್ದರು.