<p><strong>ಆಳಂದ:</strong> ಅಖಿಲ ಭಾರತ ಕಿಸಾನ್ ಸಭಾ ತಾಲ್ಲೂಕು ಸಮಿತಿ ಹಾಗೂ ಭಾರತೀಯ ಕೃಷಿ ಕೂಲಿಕಾರ್ಮಿಕರ ಸಂಘದ ನೇತೃತ್ವದಲ್ಲಿ ಸೋಮವಾರ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಶಾಸಕರ ಸಂಪರ್ಕ ಕಚೇರಿಗೆ ಮುಂದೆ ಪ್ರತಿಭಟನೆ ಕೈಗೊಳ್ಳಲಾಯಿತು.</p>.<p>ಹೋರಾಟಗಾರ ಮೌಲಾ ಮುಲ್ಲಾ ನೇತೃತ್ವದಲ್ಲಿ ಕಳೆದ ಮಾರ್ಚ್ 2ರಿಂದ ಸತತ ಎರಡು ತಿಂಗಳಿನಿಂದ ಆಳಂದ ಪಟ್ಟಣದಲ್ಲಿ ನಡೆಸಲಾಗುತ್ತಿರುವ ಧರಣಿ ಸತ್ಯಾಗ್ರಹದ ಸ್ಥಳದಿಂದ ಶಾಸಕ ಬಿ.ಆರ್.ಪಾಟೀಲ ಅವರ ಸಂಪರ್ಕ ಕಚೇರಿಯವರೆಗೆ ಕಾಲ್ನಡಿಗೆ ಮೆರವಣಿಗೆ ನಡೆಸಲಾಯಿತು.</p>.<p>ಮೌಲಾ ಮುಲ್ಲಾ ಮಾತನಾಡಿ, ‘ಕೃಷಿಕರು, ಕೂಲಿಕಾರ್ಮಿಕರ ಬ್ಯಾಂಕ್ ಸಾಲ ಸಂಪೂರ್ಣ ಮನ್ನಾ ಮಾಡಬೇಕು, ಮುಂಗಾರು ಬಿತ್ತನೆ ಪೂರ್ವದಲ್ಲಿ ರೈತರಿಗೆ ಅಗತ್ಯ ಬೀಜ, ಗೊಬ್ಬರ ಹಾಗೂ ಕೃಷಿ ಚಟುವಟಿಕೆಗಳ ಸಲಕರಣೆ ವಿತರಣೆ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>ಕಿಸಾನ್ ಸಭಾ ಜಿಲ್ಲಾಧ್ಯಕ್ಷ ಭೀಮಾಶಂಕರ ಮಾಡಿಯಾಳ, ಧರ್ಮಣ್ಣಾ ಪೂಜಾರಿ, ಮಹಾದೇವ ಪೂಜಾರಿ, ಅಸ್ಪಾಕ್ ಮುಲ್ಲಾ, ಪಂಡಿತ ಸಲಗರೆ, ರಮೇಶ ಹತ್ತಗಾಳೆ, ಮಹಾದೇವ ಜಿಡ್ಡೆ, ಕಮಲೇಶ ಅವಟೆ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-31-1744762745</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಳಂದ:</strong> ಅಖಿಲ ಭಾರತ ಕಿಸಾನ್ ಸಭಾ ತಾಲ್ಲೂಕು ಸಮಿತಿ ಹಾಗೂ ಭಾರತೀಯ ಕೃಷಿ ಕೂಲಿಕಾರ್ಮಿಕರ ಸಂಘದ ನೇತೃತ್ವದಲ್ಲಿ ಸೋಮವಾರ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಶಾಸಕರ ಸಂಪರ್ಕ ಕಚೇರಿಗೆ ಮುಂದೆ ಪ್ರತಿಭಟನೆ ಕೈಗೊಳ್ಳಲಾಯಿತು.</p>.<p>ಹೋರಾಟಗಾರ ಮೌಲಾ ಮುಲ್ಲಾ ನೇತೃತ್ವದಲ್ಲಿ ಕಳೆದ ಮಾರ್ಚ್ 2ರಿಂದ ಸತತ ಎರಡು ತಿಂಗಳಿನಿಂದ ಆಳಂದ ಪಟ್ಟಣದಲ್ಲಿ ನಡೆಸಲಾಗುತ್ತಿರುವ ಧರಣಿ ಸತ್ಯಾಗ್ರಹದ ಸ್ಥಳದಿಂದ ಶಾಸಕ ಬಿ.ಆರ್.ಪಾಟೀಲ ಅವರ ಸಂಪರ್ಕ ಕಚೇರಿಯವರೆಗೆ ಕಾಲ್ನಡಿಗೆ ಮೆರವಣಿಗೆ ನಡೆಸಲಾಯಿತು.</p>.<p>ಮೌಲಾ ಮುಲ್ಲಾ ಮಾತನಾಡಿ, ‘ಕೃಷಿಕರು, ಕೂಲಿಕಾರ್ಮಿಕರ ಬ್ಯಾಂಕ್ ಸಾಲ ಸಂಪೂರ್ಣ ಮನ್ನಾ ಮಾಡಬೇಕು, ಮುಂಗಾರು ಬಿತ್ತನೆ ಪೂರ್ವದಲ್ಲಿ ರೈತರಿಗೆ ಅಗತ್ಯ ಬೀಜ, ಗೊಬ್ಬರ ಹಾಗೂ ಕೃಷಿ ಚಟುವಟಿಕೆಗಳ ಸಲಕರಣೆ ವಿತರಣೆ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>ಕಿಸಾನ್ ಸಭಾ ಜಿಲ್ಲಾಧ್ಯಕ್ಷ ಭೀಮಾಶಂಕರ ಮಾಡಿಯಾಳ, ಧರ್ಮಣ್ಣಾ ಪೂಜಾರಿ, ಮಹಾದೇವ ಪೂಜಾರಿ, ಅಸ್ಪಾಕ್ ಮುಲ್ಲಾ, ಪಂಡಿತ ಸಲಗರೆ, ರಮೇಶ ಹತ್ತಗಾಳೆ, ಮಹಾದೇವ ಜಿಡ್ಡೆ, ಕಮಲೇಶ ಅವಟೆ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-31-1744762745</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>