ಮದ್ಯ ಸಾಗಾಟ ಮಾಡುತ್ತಿದ್ದ ಆರೋಪಿ ಬೈಕ್ ಬಿಟ್ಟು ಪರಾರಿಯಾಗಿದ್ದಾರೆ. ಅಬಕಾರಿ ನಿರೀಕ್ಷಕ ರಮೇಶ ಬಿರಾದಾರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಸಿಬ್ಬಂದಿ ಶಿವಾನಂದ ಐನಾಪುರ, ಶರಣಬಸಪ್ಪ ಪಾಟೀಲ, ನಾಗರಾಜ, ಸುಭಾಷ, ಮಲ್ಲು ಭಾಗವಹಿಸಿದ್ದರು. ಆರೋಪಿ ಪತ್ತೆಗೆ ಶೋಧ ನಡೆಯುತ್ತಿದೆ. ಪಟ್ಟಣದ ಅಬಕಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.