<p><strong>ಕಲಬುರಗಿ:</strong> ದಕ್ಷಿಣ ಮತಕ್ಷೇತ್ರ ವ್ಯಾಪ್ತಿಯ ಪಟ್ಟಣ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯಡಿಯಲ್ಲಿ ಬರುವ ಜಿನುಗು ಕೆರೆ ನಿರ್ಮಾಣ ಕಾಮಗಾರಿಗೆ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಚಾಲನೆ ನೀಡಿದರು.</p>.<p>ಪಟ್ಟಣ ಗ್ರಾಮದ ಸರ್ವೆ ನಂಬರ್ 165, 12, 2ರಲ್ಲಿ ಈ ಜಿನುಗು ಕೆರೆ ನಿರ್ಮಾಣವಾಗುತ್ತಿದೆ. ಕೆರೆ ನಿರ್ಮಾಣದಿಂದ ಗ್ರಾಮದಲ್ಲಿ ಅಂತರ್ಜಲ ಮಟ್ಟ ಹೆಚ್ಚಲಿದೆ. ಅಲ್ಲದೆ ನೀರಾವರಿ, ದನಕರುಗಳಿಗೂ ಅನುಕೂಲವಾಗಲಿದೆ ಎಂದು ಶಾಸಕರು ತಿಳಿಸಿದರು.</p>.<p>ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕೆರೆ ನಿರ್ಮಾಣದ ಭರವಸೆ ನೀಡಿದಂತೆ, ಇಂದು ಬೇಡಿಕೆ ಪೂರೈಸಲಾಗುತ್ತಿದೆ. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಆಡಳಿತ ನೀಡುತ್ತಿದೆ ಎಂದು ಹೇಳಿದರು.</p>.<p>ಪಟ್ಟಣದಲ್ಲಿ 20 ಎಕರೆ ವಿಸ್ತೀರ್ಣದಲ್ಲಿ ಕೆರೆ ನಿರ್ಮಾಣ ಯೋಜನೆ ರೂಪಿಸಲಾಗಿದೆ. ಕೆರೆಗೆ ಜಮೀನು ನೀಡಿದ ರೈತರ ಪ್ರತಿ ಎಕರೆ ಭೂಮಿಗೆ ₹13 ಲಕ್ಷದಂತೆ ಹಣ ನೀಡಲಾಗುತ್ತಿದೆ. ರೈತರು, ಗ್ರಾಮಸ್ಥರ ಸಹಕಾರದಿಂದ ಈ ಯೋಜನೆ ಜಾರಿಗೊಳ್ಳುತ್ತಿದೆ ಎಂದರು.</p>.<p>ಸಂತೋಷ ಪಾಟೀಲ ದಣ್ಣೂರ, ನೀಲಕಂಠ ಮೂಲಗೆ, ಭೀಮರಾವ ಮೇಳಕುಂದಿ, ಲಿಂಗರಾಜ ಕಣ್ಣಿ, ಇಸ್ಮಾಯಿಲ್ ಸಾಬ್, ಅಂಬಾರಾವ, ಶಿವಪುತ್ರ, ಶರಣು, ಖುರ್ಶೀದ್ ಪಟೇಲ್, ರಮೇಶ, ಅಸ್ಲಂ ಸೇರಿದಂತೆ ಪಟ್ಟಣದ ಪ್ರಮುಖರು, ಸಣ್ಣ ನೀರಾವರಿ ಇಲಾಖೆಯ ಎಂಜಿನಿಯರ್ಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ದಕ್ಷಿಣ ಮತಕ್ಷೇತ್ರ ವ್ಯಾಪ್ತಿಯ ಪಟ್ಟಣ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯಡಿಯಲ್ಲಿ ಬರುವ ಜಿನುಗು ಕೆರೆ ನಿರ್ಮಾಣ ಕಾಮಗಾರಿಗೆ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಚಾಲನೆ ನೀಡಿದರು.</p>.<p>ಪಟ್ಟಣ ಗ್ರಾಮದ ಸರ್ವೆ ನಂಬರ್ 165, 12, 2ರಲ್ಲಿ ಈ ಜಿನುಗು ಕೆರೆ ನಿರ್ಮಾಣವಾಗುತ್ತಿದೆ. ಕೆರೆ ನಿರ್ಮಾಣದಿಂದ ಗ್ರಾಮದಲ್ಲಿ ಅಂತರ್ಜಲ ಮಟ್ಟ ಹೆಚ್ಚಲಿದೆ. ಅಲ್ಲದೆ ನೀರಾವರಿ, ದನಕರುಗಳಿಗೂ ಅನುಕೂಲವಾಗಲಿದೆ ಎಂದು ಶಾಸಕರು ತಿಳಿಸಿದರು.</p>.<p>ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕೆರೆ ನಿರ್ಮಾಣದ ಭರವಸೆ ನೀಡಿದಂತೆ, ಇಂದು ಬೇಡಿಕೆ ಪೂರೈಸಲಾಗುತ್ತಿದೆ. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಆಡಳಿತ ನೀಡುತ್ತಿದೆ ಎಂದು ಹೇಳಿದರು.</p>.<p>ಪಟ್ಟಣದಲ್ಲಿ 20 ಎಕರೆ ವಿಸ್ತೀರ್ಣದಲ್ಲಿ ಕೆರೆ ನಿರ್ಮಾಣ ಯೋಜನೆ ರೂಪಿಸಲಾಗಿದೆ. ಕೆರೆಗೆ ಜಮೀನು ನೀಡಿದ ರೈತರ ಪ್ರತಿ ಎಕರೆ ಭೂಮಿಗೆ ₹13 ಲಕ್ಷದಂತೆ ಹಣ ನೀಡಲಾಗುತ್ತಿದೆ. ರೈತರು, ಗ್ರಾಮಸ್ಥರ ಸಹಕಾರದಿಂದ ಈ ಯೋಜನೆ ಜಾರಿಗೊಳ್ಳುತ್ತಿದೆ ಎಂದರು.</p>.<p>ಸಂತೋಷ ಪಾಟೀಲ ದಣ್ಣೂರ, ನೀಲಕಂಠ ಮೂಲಗೆ, ಭೀಮರಾವ ಮೇಳಕುಂದಿ, ಲಿಂಗರಾಜ ಕಣ್ಣಿ, ಇಸ್ಮಾಯಿಲ್ ಸಾಬ್, ಅಂಬಾರಾವ, ಶಿವಪುತ್ರ, ಶರಣು, ಖುರ್ಶೀದ್ ಪಟೇಲ್, ರಮೇಶ, ಅಸ್ಲಂ ಸೇರಿದಂತೆ ಪಟ್ಟಣದ ಪ್ರಮುಖರು, ಸಣ್ಣ ನೀರಾವರಿ ಇಲಾಖೆಯ ಎಂಜಿನಿಯರ್ಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>