ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇತ್ತೀಚೆಗೆ ನಡೆದ ಪಂಚರಾಜ್ಯಗಳ ಸೋಲಿನಿಂದ ಕಾಂಗ್ರೆಸ್ ನಾಯಕರು ಕಂಗೆಟ್ಟಿದ್ದಾರೆ. ರಾಜ್ಯದ ನಾಯಕರು ನಿದ್ರಾಹೀನರಾಗಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಎಲ್ಲ ನಾಯಕರೂ ಜಾಮೀನಿನ ಮೇಲೆ ಹೊರಗಡೆಯೇ ಇದ್ದಾರೆ. ಗಲಭೆಗಳ ಸೃಷ್ಟಿ, ಅಲ್ಪಸಂಖ್ಯಾತರ ತುಷ್ಟೀಕರಣ, ಜಾತಿ ರಾಜಕೀಯ ಮಾಡಿಕೊಂಡಿದ್ದ ಕಾಂಗ್ರೆಸ್ ಮುಖಂಡರಿಗೆ ಅವು ಫಲಕೊಡುವ ಭರವಸೆ ಇಲ್ಲ. ಸಿದ್ದರಾಮಯ್ಯ ಅವರು ಹಗರಣದ ಬಗ್ಗೆ ಮಾತನಾಡುವುದು ಭೂತದ ಬಾಯಲ್ಲಿ ಭಗವದ್ಗೀತೆ ನುಡಿದಂತೆ ಆಗಿದೆ. 2013ರಲ್ಲಿ ಕೆಪಿಎಸ್ಸಿ ಹಗರಣ ನಡೆಯಿತು. 2015ರಲ್ಲಿ ಪೊಲೀಸ್ ನೇಮಕಾತಿಯಲ್ಲಿ ಗೋಲ್ಮಾಲ್ ನಡೆಯಿತು. ಆಗ ಇದ್ದ ಸರ್ಕಾರ ಯಾವುದು? ಮುಖ್ಯಮಂತ್ರಿ ಯಾರಾಗಿದ್ದರು’ ಎಂದು ಪ್ರಶ್ನಿಸಿದರು.