‘2014ರಲ್ಲಿ ಈಶಾನ್ಯ ಕರ್ನಾಟಕ ಶಿಕ್ಷಕರ ವಿಧಾನ ಪರಿಷತ್ ಮತಕ್ಷೇತ್ರಕ್ಕೆ ಅಭ್ಯರ್ಥಿಯಾದಾಗ 10 ವರ್ಷ ಸೇವಾವಧಿಗೆ ರಾಜೀನಾಮೆ ನೀಡಿ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತೆ. ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡ ನನ್ನನ್ನು ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿದ ನಂತರ 2018ರ ವಿಧಾನಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರು ಮಾಡಿದ ಜನಪರ ಕೆಲಸಗಳ ಬಗ್ಗೆ ಹೈ.ಕ. ಭಾಗದಲ್ಲಿ ಲಕ್ಷಾಂತರ ಕರಪತ್ರಗಳನ್ನು ಮುದ್ರಿಸಿ ಪ್ರಚಾರ ಮಾಡಿದ್ದೆ’ ಎಂದು ಅವರು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.