ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್‌ಗೆ ಅಂಬಲಗಿ ರಾಜೀನಾಮೆ

ಪರಿಷತ್‌ ಚುನಾವಣೆಗೆ ಟಿಕೆಟ್ ನಿರಾಕರಣೆಗೆ ಬೇಸರ
Last Updated 4 ಅಕ್ಟೋಬರ್ 2020, 16:25 IST
ಅಕ್ಷರ ಗಾತ್ರ

ಕಲಬುರ್ಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಗೆ ಜೆಡಿಎಸ್‌ನಿಂದ ಸ್ಪರ್ಧಿಸಲು ಬಯಸಿದ್ದ ಪಕ್ಷದ ಮುಖಂಡ ಎಂ.ಬಿ. ಅಂಬಲಗಿ ಅವರ ಬರಲು ತಿಮ್ಮಯ್ಯ ಪುರ್ಲೆ ಅವರಿಗೆ ಟಿಕೆಟ್ ಘೋಷಿಸಿದ್ದರಿಂದ ನೊಂದಿರುವ ಅಂಬಲಗಿ ಅವರು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

‘2014ರಲ್ಲಿ ಈಶಾನ್ಯ ಕರ್ನಾಟಕ ಶಿಕ್ಷಕರ ವಿಧಾನ ಪರಿಷತ್ ಮತಕ್ಷೇತ್ರಕ್ಕೆ ಅಭ್ಯರ್ಥಿಯಾದಾಗ 10 ವರ್ಷ ಸೇವಾವಧಿಗೆ ರಾಜೀನಾಮೆ ನೀಡಿ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತೆ. ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡ ನನ್ನನ್ನು ಜೆಡಿಎಸ್‍ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿದ ನಂತರ 2018ರ ವಿಧಾನಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರು ಮಾಡಿದ ಜನಪರ ಕೆಲಸಗಳ ಬಗ್ಗೆ ಹೈ.ಕ. ಭಾಗದಲ್ಲಿ ಲಕ್ಷಾಂತರ ಕರಪತ್ರಗಳನ್ನು ಮುದ್ರಿಸಿ ಪ್ರಚಾರ ಮಾಡಿದ್ದೆ’ ಎಂದು ಅವರು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ವಿಧಾನ ಪರಿಷತ್ ಚುನಾವಣೆಗೆ ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ನನ್ನನ್ನು ಘೋಷಿಸದೆ ಬೇರೆಯವರ ಹೆಸರನ್ನು ಪ್ರಕಟಿಸಿರುವುದು ಮನಸ್ಸಿಗೆ ನೋವಾಗಿದೆ. ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯನನ್ನಾಗಿ ನೇಮಕ ಮಾಡುವುದಾಗಿ ಭರವಸೆ ನೀಡಿದ್ದರು. ಅದು ಕಾರ್ಯಗತವಾಗಿಲ್ಲ. ಟಿಕೆಟ್‌ ಸಹ ತಪ್ಪಿಸಲಾಗಿದೆ. ಈ ಎಲ್ಲಾ ಕಾರಣಗಳಿಂದ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗದೇ ರಾಜೀನಾಮೆ ನೀಡಿರುವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT