ಈ ಕುರಿತು ಪತ್ರಿಕಾಗೋಷ್ಠಿ ನಡೆಸಿದ ಅವರು, 2016ರಲ್ಲಿ ಸಮುದಾಯ ಭವನಕ್ಕೆ ₹85 ಲಕ್ಷ ಮಂಜೂರಾಗಿದ್ದು, ಗುತ್ತಿಗೆದಾರರು ತಳಪಾಯ ಹಾಕಿ ನಾಪತ್ತೆಯಾಗಿದ್ದಾರೆ. ಪುರಸಭೆ ಮುಖ್ಯಾಧಿಕಾರಿ ಮತ್ತು ಕಿರಿಯ ಎಂಜಿನಿಯರ್ ನಿರ್ಲಕ್ಷ್ಯದಿಂದ ಕಾಮಗಾರಿ ಸ್ಥಗಿತವಾಗಿದೆ. ಹೀಗಾಗಿ ಈ ಇಬ್ಬರೂ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ಇಲ್ಲದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರಸ್ತೆ ತಡೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.