ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಅಂಬೇಡ್ಕರ್‌ ಸಮುದಾಯ ಭವನ: ಅಧಿಕಾರಿಗಳ ನಿರ್ಲಕ್ಷ್ಯ’

Published 1 ಫೆಬ್ರುವರಿ 2024, 14:02 IST
Last Updated 1 ಫೆಬ್ರುವರಿ 2024, 14:02 IST
ಅಕ್ಷರ ಗಾತ್ರ

ಕಲಬುರಗಿ: ‘ಚಿತ್ತಾಪೂರ ತಾಲ್ಲೂಕಿನ ವಾಡಿ ಪಟ್ಟಣದ ವಾರ್ಡ್‌ 16ರಲ್ಲಿರುವ ಅಂಬೇಡ್ಕರ್‌ ಸಮುದಾಯ ಭವನ ಎಂಟು ವರ್ಷಗಳಾದರೂ ತಳಪಾಯ ಬಿಟ್ಟು ಮೇಲೆದ್ದಿಲ್ಲ’ ಎಂದು ರಿಪಬ್ಲಿಕನ್‌ ಪಾರ್ಟಿ ಆಫ್‌ ಇಂಡಿಯಾದ ಜಿಲ್ಲಾ ಉಪಾಧ್ಯಕ್ಷ ಶರಣಪ್ಪ ಎಂ. ವಾಡೇಕರ್‌ ಹೇಳಿದರು.

ಈ ಕುರಿತು ಪತ್ರಿಕಾಗೋಷ್ಠಿ ನಡೆಸಿದ ಅವರು, 2016ರಲ್ಲಿ ಸಮುದಾಯ ಭವನಕ್ಕೆ ₹85 ಲಕ್ಷ ಮಂಜೂರಾಗಿದ್ದು, ಗುತ್ತಿಗೆದಾರರು ತಳಪಾಯ ಹಾಕಿ ನಾಪತ್ತೆಯಾಗಿದ್ದಾರೆ. ಪುರಸಭೆ ಮುಖ್ಯಾಧಿಕಾರಿ ಮತ್ತು ಕಿರಿಯ ಎಂಜಿನಿಯರ್‌ ನಿರ್ಲಕ್ಷ್ಯದಿಂದ ಕಾಮಗಾರಿ ಸ್ಥಗಿತವಾಗಿದೆ. ಹೀಗಾಗಿ ಈ ಇಬ್ಬರೂ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ಇಲ್ಲದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರಸ್ತೆ ತಡೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಯುವಘಟಕದ ಜಿಲ್ಲಾ ಅಧ್ಯಕ್ಷ ಅಭಿಷೇಕ್‌ ಚಕ್ರವರ್ತಿ, ಬಸವರಾಜ, ರುದ್ರ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT