ಜೈ ಭಾರತ ಮಾತಾ ಸೇವಾ ಸಮಿತಿಯನ್ನು ಹವಾ ಮಲ್ಲಿನಾಥ ಮಹಾರಾಜರೇ ಸ್ಥಾಪಿಸಿದ್ದಾರೆ. ಇದು ರಾಷ್ಟ್ರಮಟ್ಟದ ಸಂಘಟನೆಯಾಗಿದ್ದು, ನವದೆಹಲಿಯಲ್ಲಿ ಪ್ರಧಾನ ಕಚೇರಿ ಇದೆ. ನಮ್ಮ ನಾಡಿನ ನಾಯಕರು, ಮಹಾತ್ಮರ ಜಯಂತಿಗಳನ್ನು ವಿಶಿಷ್ಟವಾಗಿ ಆಚರಿಸುವ ಉದ್ದೇಶದಿಂದ ನವದೆಹಲಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಇದಕ್ಕೆ ದೇಶದ ಬೇರೆ ಬೇರೆ ಭಾಗಗಳು ಗಣ್ಯರು, ರೈತ ಮುಖಂಡರು, ಪರಿಶಿಷ್ಟ ಸಮುದಾಯದ ನಾಯಕರು ಕೂಡ ಭಾಗವಹಿಸಲಿದ್ದಾರೆ. ಜಿಲ್ಲೆಯಿಂದ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಜನ ಪಾಲ್ಗೊಳ್ಳಬೇಕು ಎಂದು ಅವರು ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಕೋರಿದರು.