ಕಲಬುರ್ಗಿ: ಡಾ.ಬಾಬಾ ಸಾಹೇಬ ಅಂಬೇಡ್ಕರ್ ಜಯಂತಿ ಅಂಗವಾಗಿ ನಗರದ ಜಗತ್ ವೃತ್ತದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಜಿಲ್ಲಾಧಿಕಾರಿ ಶರತ್ ಬಿ. ಹಾಗೂ ಪೊಲೀಸ್ ಕಮಿಷನರ್ ಸತೀಶಕುಮಾರ್ ಎನ್. ಮಾಲಾರ್ಪಣೆ ಮಾಡಿದರು.
ಲಾಕ್ಡೌನ್ ಪ್ರಯುಕ್ತ ಜಿಲ್ಲಾಡಳಿತ ಸರಳವಾಗಿ ಜಯಂತಿ ಆಚರಣೆ ಮಾಡಿದೆ.
ಜಿಲ್ಲಾ ಅಂಬೇಡ್ಕರ್ ಆಚರಣಾ ಸಮಿತಿ ಹಾಗೂ ವಿವಿಧ ದಲಿತ ಸಂಘಟನೆಗಳು ಮೇ 28ರಂದು ಅಂಬೇಡ್ಕರ್ ಜಯಂತಿ ಹಾಗೂ ಬುದ್ಧ ಪೂರ್ಣಿಮೆಯನ್ನು ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಿವೆ.