<p><strong>ಚಿತ್ತಾಪುರ (ಕಲಬುರ್ಗಿ ಜಿಲ್ಲೆ):</strong> ತಾಲ್ಲೂಕಿನ ಭಾಗೋಡಿ ಗ್ರಾಮದಲ್ಲಿ ಡಾ.ಬಿ.ಅರ್. ಅಂಬೇಡ್ಕರ್ ಧ್ವಜ ಕಟ್ಟೆಯ ಮೇಲಿರುವ ಅಂಬೇಡ್ಕರ್ ಭಾವಚಿತ್ರ ಇರುವ ಬೋರ್ಡಿನ ಮೇಲೆ ಚಪ್ಪಲಿ ಇಟ್ಟು ಅವಮಾನಿಸಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.</p>.<p>ಕಾಗಿಣಾ ನದಿ ದಂಡೆಯ ಮೇಲಿರುವ ಧ್ವಜಕಟ್ಟೆಯಲ್ಲಿ ಚಪ್ಪಲಿ ಇಟ್ಟ ಬೆಳಕಿಗೆ ಬರುತ್ತಿದ್ದಂತೆ ಸುದ್ದಿ ತಿಳಿದ ದಲಿತ ಸಮುದಾಯದ ನೂರಾರು ಸಂಖ್ಯೆಯಲ್ಲಿ ಜನರು, ಮಹಿಳೆಯರು ಘಟನಾ ಸ್ಥಳಕ್ಕಾಗಮಿಸಿ ಆಕ್ರೋಶ ವ್ಯಕ್ತ ಮಾಡಿದರು.</p>.<p>ಮುಖ್ಯ ರಸ್ತೆಯ ಮೇಲೆ ಕುಳಿತು ಮಹಿಳೆಯರು ಘೋಷಣೆ ಕೂಗಿದರು. ವಾಹನ ಸಂಚಾರ ತಡೆದು ಆರೋಪಿಗಳ ಪತ್ತೆ ಮಾಡಿ, ಬಂಧಿಸಿ ಶಿಕ್ಷೆ ಕೊಡಿಸುವಂತೆ ಆಗ್ರಹಿಸಿದರು.</p>.<p>ಘಟನಾ ಸ್ಥಳಕ್ಕೆ ತಹಶೀಲ್ದಾರ್ ಉಮಾಕಾಂತ ಹಳ್ಳೆ, ಶಹಾಬಾದ್ ಡಿವೈಎಸ್ಪಿ ಕೆ.ಬಸವರಾಜ, ಸಿಪಿಐ ಪಂಚಾಕ್ಷರಿ ಸಾಲಿಮಠ, ಪಿಎಸ್ಐ ಶ್ರೀಶೈಲ ಅಂಬಾಟಿ, ವಾಡಿ ಪಿಎಸ್ಐ ವಿಜಯಕುಮಾರ ಅವರು ಪರಿಶೀಲನೆ ನಡೆಸಿದರು.</p>.<p>ಕೃತ್ಯ ಎಸಗಿದ ಆರೋಪಿಗಳ ಪತ್ತೆಗೆ ಕಲಬುರ್ಗಿಯಿಂದ ಪೊಲೀಸ್ ಶ್ವಾನದಳ ಕರೆಯಿಸಿ ತಪಾಸಣೆ ಮಾಡಲಾಯಿತು.</p>.<p>ಘಟನಾ ಸ್ಥಳದಿಂದ ಊರಲ್ಲಿ ಸುತ್ತಾಡಿದ ಶ್ವಾನವು ಮತ್ತೆ ಅದೇ ಘಟನಾ ಸ್ಥಳಕ್ಕೆ ಬಂದು ನಿಂತಿತು.</p>.<p>ದಲಿತ ಮುಖಂಡರಾದ ಸುನೀಲ್ ದೊಡ್ಡಮನಿ, ಮಲ್ಲಪ್ಪ ಹೊಸಮನಿ, ಜಿ.ಪಂ ಸದಸ್ಯ ಶಿವರುದ್ರ ಭೀಣಿ ಅವರು ಆಗಮಿಸಿ ಘಟನೆಯನ್ನು ಖಂಡಿಸಿ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಬೇಕು ಎಂದು ಒತ್ತಾಯಿಸಿದರು.</p>.<p>ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು ವಾರದೊಳಗೆ ಆರೋಪಿಗಳ ಪತ್ತೆ ಮಾಡಿ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಡಿವೈಎಸ್ಪಿ ಕೆ.ಬಸವರಾಜ ಅವರು ಹೇಳಿದರು.</p>.<p>ಅಧಿಕಾರಿಗಳು ಮತ್ತು ಮುಖಂಡರು ಡಾ.ಅಂಬೇಡ್ಕರ್ ಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿ ಮಾಲಾರ್ಪಣೆ ಮಾಡಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ತಾಪುರ (ಕಲಬುರ್ಗಿ ಜಿಲ್ಲೆ):</strong> ತಾಲ್ಲೂಕಿನ ಭಾಗೋಡಿ ಗ್ರಾಮದಲ್ಲಿ ಡಾ.ಬಿ.ಅರ್. ಅಂಬೇಡ್ಕರ್ ಧ್ವಜ ಕಟ್ಟೆಯ ಮೇಲಿರುವ ಅಂಬೇಡ್ಕರ್ ಭಾವಚಿತ್ರ ಇರುವ ಬೋರ್ಡಿನ ಮೇಲೆ ಚಪ್ಪಲಿ ಇಟ್ಟು ಅವಮಾನಿಸಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.</p>.<p>ಕಾಗಿಣಾ ನದಿ ದಂಡೆಯ ಮೇಲಿರುವ ಧ್ವಜಕಟ್ಟೆಯಲ್ಲಿ ಚಪ್ಪಲಿ ಇಟ್ಟ ಬೆಳಕಿಗೆ ಬರುತ್ತಿದ್ದಂತೆ ಸುದ್ದಿ ತಿಳಿದ ದಲಿತ ಸಮುದಾಯದ ನೂರಾರು ಸಂಖ್ಯೆಯಲ್ಲಿ ಜನರು, ಮಹಿಳೆಯರು ಘಟನಾ ಸ್ಥಳಕ್ಕಾಗಮಿಸಿ ಆಕ್ರೋಶ ವ್ಯಕ್ತ ಮಾಡಿದರು.</p>.<p>ಮುಖ್ಯ ರಸ್ತೆಯ ಮೇಲೆ ಕುಳಿತು ಮಹಿಳೆಯರು ಘೋಷಣೆ ಕೂಗಿದರು. ವಾಹನ ಸಂಚಾರ ತಡೆದು ಆರೋಪಿಗಳ ಪತ್ತೆ ಮಾಡಿ, ಬಂಧಿಸಿ ಶಿಕ್ಷೆ ಕೊಡಿಸುವಂತೆ ಆಗ್ರಹಿಸಿದರು.</p>.<p>ಘಟನಾ ಸ್ಥಳಕ್ಕೆ ತಹಶೀಲ್ದಾರ್ ಉಮಾಕಾಂತ ಹಳ್ಳೆ, ಶಹಾಬಾದ್ ಡಿವೈಎಸ್ಪಿ ಕೆ.ಬಸವರಾಜ, ಸಿಪಿಐ ಪಂಚಾಕ್ಷರಿ ಸಾಲಿಮಠ, ಪಿಎಸ್ಐ ಶ್ರೀಶೈಲ ಅಂಬಾಟಿ, ವಾಡಿ ಪಿಎಸ್ಐ ವಿಜಯಕುಮಾರ ಅವರು ಪರಿಶೀಲನೆ ನಡೆಸಿದರು.</p>.<p>ಕೃತ್ಯ ಎಸಗಿದ ಆರೋಪಿಗಳ ಪತ್ತೆಗೆ ಕಲಬುರ್ಗಿಯಿಂದ ಪೊಲೀಸ್ ಶ್ವಾನದಳ ಕರೆಯಿಸಿ ತಪಾಸಣೆ ಮಾಡಲಾಯಿತು.</p>.<p>ಘಟನಾ ಸ್ಥಳದಿಂದ ಊರಲ್ಲಿ ಸುತ್ತಾಡಿದ ಶ್ವಾನವು ಮತ್ತೆ ಅದೇ ಘಟನಾ ಸ್ಥಳಕ್ಕೆ ಬಂದು ನಿಂತಿತು.</p>.<p>ದಲಿತ ಮುಖಂಡರಾದ ಸುನೀಲ್ ದೊಡ್ಡಮನಿ, ಮಲ್ಲಪ್ಪ ಹೊಸಮನಿ, ಜಿ.ಪಂ ಸದಸ್ಯ ಶಿವರುದ್ರ ಭೀಣಿ ಅವರು ಆಗಮಿಸಿ ಘಟನೆಯನ್ನು ಖಂಡಿಸಿ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಬೇಕು ಎಂದು ಒತ್ತಾಯಿಸಿದರು.</p>.<p>ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು ವಾರದೊಳಗೆ ಆರೋಪಿಗಳ ಪತ್ತೆ ಮಾಡಿ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಡಿವೈಎಸ್ಪಿ ಕೆ.ಬಸವರಾಜ ಅವರು ಹೇಳಿದರು.</p>.<p>ಅಧಿಕಾರಿಗಳು ಮತ್ತು ಮುಖಂಡರು ಡಾ.ಅಂಬೇಡ್ಕರ್ ಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿ ಮಾಲಾರ್ಪಣೆ ಮಾಡಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>