<p><strong>ಕಲಬುರಗಿ</strong>: ‘ಕೋಟನೂರು (ಡಿ) ಗ್ರಾಮದ ಲುಂಬಿನಿ ಉದ್ಯಾನದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಅಪಮಾನ ಮಾಡಿದ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಲಾಗುವುದು’ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.</p>.<p>‘ಮೂರು ತಿಂಗಳ ಹಿಂದೆ ನಡೆದಿದ್ದ ಘಟನೆಯನ್ನು ಚುನಾವಣೆಯಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಿಡುವುದಿಲ್ಲ. ಪುತ್ಥಳಿಗೆ ಅಪಮಾನ ಮಾಡಿದ್ದು ಯಾರು? ಏಕೆ ದುಷ್ಕೃತ್ಯ ಎಸಗಿದ್ದರು ಎಂಬುದು ತನಿಖೆಯಿಂದ ಬಯಲಾಗಲಿದೆ. ಅಂದು ನಡೆದಿದ್ದ ಗಲಾಟೆಯ ಬಗ್ಗೆಯೂ ತನಿಖೆಯಾಗಲಿದೆ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಸಾಕ್ಷಿ, ಪುರಾವೆಗಳ ಕಲೆ ಹಾಕುವಲ್ಲಿ ಪೊಲೀಸ್ ತನಿಖಾ ಅಧಿಕಾರಿಗಳು ಎಡವಿ, ಸುಲಭವಾಗಿ ಜಾಮೀನು ಸಿಗುವಂತೆ ಮಾಡಿದ್ದು ಕಂಡುಬಂದರೆ, ಅವರ ಮೇಲೂ ಕ್ರಮ ತೆಗೆದುಕೊಳ್ಳಲಾಗುವುದು’ ಎಂದರು.</p>.<p>‘ಹುಸಿ ಜಾತಿ ನಿಂದನೆ ಪ್ರಕರಣಗಳು ಕೇಳಿಬರುತ್ತಿವೆ. ದೂರು ದಾಖಲಿಸುವ ಮುನ್ನ ವಸ್ತುಸ್ಥಿತಿ ಪರಿಶೀಲಿಸುವಂತೆ ಅಧಿಕಾರಿಗಳಲ್ಲಿ ಸಂವೇದನೆ ಮೂಡಿಸುತ್ತೇವೆ. ಸುಳ್ಳು ಪ್ರಕರಣ ದಾಖಲಿಸುವವರನ್ನು ವಿಚಾರಣೆಗೆ ಒಳಪಡಿಸಲಾಗುವುದು’ ಎಂದು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ‘ಕೋಟನೂರು (ಡಿ) ಗ್ರಾಮದ ಲುಂಬಿನಿ ಉದ್ಯಾನದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಅಪಮಾನ ಮಾಡಿದ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಲಾಗುವುದು’ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.</p>.<p>‘ಮೂರು ತಿಂಗಳ ಹಿಂದೆ ನಡೆದಿದ್ದ ಘಟನೆಯನ್ನು ಚುನಾವಣೆಯಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಿಡುವುದಿಲ್ಲ. ಪುತ್ಥಳಿಗೆ ಅಪಮಾನ ಮಾಡಿದ್ದು ಯಾರು? ಏಕೆ ದುಷ್ಕೃತ್ಯ ಎಸಗಿದ್ದರು ಎಂಬುದು ತನಿಖೆಯಿಂದ ಬಯಲಾಗಲಿದೆ. ಅಂದು ನಡೆದಿದ್ದ ಗಲಾಟೆಯ ಬಗ್ಗೆಯೂ ತನಿಖೆಯಾಗಲಿದೆ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಸಾಕ್ಷಿ, ಪುರಾವೆಗಳ ಕಲೆ ಹಾಕುವಲ್ಲಿ ಪೊಲೀಸ್ ತನಿಖಾ ಅಧಿಕಾರಿಗಳು ಎಡವಿ, ಸುಲಭವಾಗಿ ಜಾಮೀನು ಸಿಗುವಂತೆ ಮಾಡಿದ್ದು ಕಂಡುಬಂದರೆ, ಅವರ ಮೇಲೂ ಕ್ರಮ ತೆಗೆದುಕೊಳ್ಳಲಾಗುವುದು’ ಎಂದರು.</p>.<p>‘ಹುಸಿ ಜಾತಿ ನಿಂದನೆ ಪ್ರಕರಣಗಳು ಕೇಳಿಬರುತ್ತಿವೆ. ದೂರು ದಾಖಲಿಸುವ ಮುನ್ನ ವಸ್ತುಸ್ಥಿತಿ ಪರಿಶೀಲಿಸುವಂತೆ ಅಧಿಕಾರಿಗಳಲ್ಲಿ ಸಂವೇದನೆ ಮೂಡಿಸುತ್ತೇವೆ. ಸುಳ್ಳು ಪ್ರಕರಣ ದಾಖಲಿಸುವವರನ್ನು ವಿಚಾರಣೆಗೆ ಒಳಪಡಿಸಲಾಗುವುದು’ ಎಂದು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>