‘ಘಟನೆಯಿಂದಾಗಿಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ವಿಷಯ ಅರಿತು ಸ್ಥಳದಲ್ಲಿ ಜಮಾಯಿಸಿದ ದಲಿತ ಸಂಘಟನೆಗಳ ಯುವಕರು ರಸ್ತೆ ತಡೆದು ಪ್ರತಿಭಟನೆ ಮಾಡಿದರು. ಬಳಿಕ ಅಂಗಡಿ ಮುಂಗಟ್ಟುಗಳಿಗೆ ಕಲ್ಲು ಎಸೆದರು. ಬೀದಿ ಬೀದಿಯಲ್ಲಿ ಗಲಾಟೆ ಮಾಡಿ 2–3 ಬೈಕ್ಗಳನ್ನು ಜಖಂಗೊಳಿಸಿದರು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.