‘ಮಹಾದೇವಪ್ಪ ಕಡೇಚೂರ ಅವರು 70 ವರ್ಷಗಳ ಅವಧಿಯಲ್ಲಿ ದೇಶ ಸೇವೆಯಲ್ಲಿ ತೊಡಗುವುದರ ಜೊತೆಗೆ ಜಿಲ್ಲೆಯಲ್ಲಿ ಬಿಜೆಪಿಯನ್ನು ತಳ ಮಟ್ಟದಿಂದ ಕಟ್ಟಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಆರ್ಯ ಈಡಿಗ ಸಮಾಜದ ಅಭಿವೃದ್ಧಿಗೆ ನಿಸ್ವಾರ್ಥ ಸೇವೆ ಸಲ್ಲಿಸಿದ್ದು, ಇತರೆ ಸಮಾಜಗಳಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರ ಬದುಕಿನ ಆದರ್ಶಗಳನ್ನು ದಾಖಲಿಸಿ, ಮುಂದಿನ ಜನಾಂಗಕ್ಕೆ ತಿಳಿಸಲು ಈ ಸಮಾರಂಭ ಆಯೋಜಿಸಲಾಗಿದೆ’ ಎಂದು ಅವರು ಹೇಳಿದರು.