ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೊರೊನಾ ಪಾಸಿಟಿವ್ ಬಂದ ವ್ಯಕ್ತಿಗಳ ಬಳಿಗೆ ಮೊದಲು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರನ್ನು ಕಳುಹಿಸುತ್ತಾರೆ. ಆದರೆ, ಅವರಿಗೆ ವಿಶೇಷ ಭತ್ಯೆಯನ್ನು ನೀಡುತ್ತಿಲ್ಲ. ಮಾಸ್ಕ್ ಸಹ ಕಾರ್ಯಕರ್ತೆಯರೇ ಖರೀದಿ ಮಾಡಿ ಹಾಕಿಕೊಳ್ಳಬೇಕಿದೆ. ಕರ್ತವ್ಯದ ಸಂದರ್ಭದಲ್ಲಿ ಮೃತಪಟ್ಟರೆ ₹ 30 ಲಕ್ಷದ ವಿಮೆ ಮಾಡಿಸಲಾಗಿದೆ. ಆದರೆ, ಜೀವಂತವಿದ್ದಾಗ ಏನೂ ಕೊಡುತ್ತಿಲ್ಲ ಎಂದು ಟೀಕಿಸಿದರು.