ಕಲಬುರ್ಗಿ: ಅಂಗನವಾಡಿಗಳಲ್ಲೇ ಎಲ್ಕೆಜಿ,ಯುಕೆಜಿ ತರಗತಿಗಳನ್ನು ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ಅಂಗನವಾಡಿ ನೌಕರರು ನಡೆಸುತ್ತಿದ್ದ ಪಾದಯಾತ್ರೆಯನ್ನು ತುಮಕೂರಿನಲ್ಲಿ ತಡೆದಿರುವ ಸರ್ಕಾರದ ಕ್ರಮ ಖಂಡಿಸಿ ಕರ್ನಾಟಕ ಪ್ರಾಂತ ರೈತ ಸಂಘ, ಸಿಐಟಿಯು ಹಾಗೂ ಎಸ್ಎಫ್ಐ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಕಲಬುರ್ಗಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.