<p><strong>ಕಲಬುರಗಿ</strong>: ಮೊಟ್ಟೆ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಲಂಚ ಪಡೆಯುತ್ತಿದ್ದ ವೇಳೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಮೇಲ್ವಿಚಾರಕಿ ಬುಧವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.</p><p>ನಗರದ ಸ್ಟೇಷನ್ ಬಜಾರ್ ಅಂಗನವಾಡಿ ಕಾರ್ಯಕರ್ತೆ ಹೀನಾ ಹಾಗೂ ಅಂಗನವಾಡಿ ಮೇಲ್ವಿಚಾರಕಿ ಪಿಂಕುಬಾಯಿ ಗಾಯಕವಾಡ ‘ಲೋಕಾ’ ಬಲೆಗೆ ಬಿದ್ದ ಆರೋಪಿಗಳು.</p><p>‘ನಮ್ಮ ಅಂಗನವಾಡಿ ಕೇಂದ್ರಕ್ಕೆ ಮೂರು ತಿಂಗಳ ಮೊಟ್ಟೆ ಹಣವಾಗಿ ₹14,490 ಜಮೆ ಆಗಿದೆ. ಅದರಲ್ಲಿ ಒಂದು ತಿಂಗಳ ಮೊಟ್ಟೆ ಹಣ ₹4,830 ಹಾಗೂ ನವೆಂಬರ್ ಮತ್ತು ಡಿಸೆಂಬರ್ ತಿಂಗಳಿಗೆ ತಲಾ ₹600ರಂತೆ ಒಟ್ಟು ₹1,200 ಸೇರಿದಂತೆ ಒಟ್ಟು ₹6,030 ಲಂಚ ನೀಡುವಂತೆ ಇಬ್ಬರೂ ಬೇಡಿಕೆ ಇಟ್ಟಿದ್ದರು’ ಎಂದು ಕಲಬುರಗಿಯ ಉದಯ ನಗರ ಅಂಗನವಾಡಿ ಕಾರ್ಯಕರ್ತೆ ಸೌಭಾಗ್ಯ ಬಲಭೀಮ ರಾಠೋಡ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.</p><p>ಅದರಂತೆ ಲೋಕಾಯುಕ್ತ ಎಸ್ಪಿ ಸಿದ್ಧರಾಜು ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸ್ಪೆಕ್ಟರ್–2 ರಾಜಶೇಖರ ಬಡದೆಸಾರ ನೇತೃತ್ವದ ತಂಡವು ಬುಧವಾರ ಆರೋಪಿಗಳು ₹6,030 ಲಂಚ ಪಡೆಯುತ್ತಿದ್ದ ವೇಳೆ ದಾಳಿ ನಡೆಸಿ ಬಂಧಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ಮೊಟ್ಟೆ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಲಂಚ ಪಡೆಯುತ್ತಿದ್ದ ವೇಳೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಮೇಲ್ವಿಚಾರಕಿ ಬುಧವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.</p><p>ನಗರದ ಸ್ಟೇಷನ್ ಬಜಾರ್ ಅಂಗನವಾಡಿ ಕಾರ್ಯಕರ್ತೆ ಹೀನಾ ಹಾಗೂ ಅಂಗನವಾಡಿ ಮೇಲ್ವಿಚಾರಕಿ ಪಿಂಕುಬಾಯಿ ಗಾಯಕವಾಡ ‘ಲೋಕಾ’ ಬಲೆಗೆ ಬಿದ್ದ ಆರೋಪಿಗಳು.</p><p>‘ನಮ್ಮ ಅಂಗನವಾಡಿ ಕೇಂದ್ರಕ್ಕೆ ಮೂರು ತಿಂಗಳ ಮೊಟ್ಟೆ ಹಣವಾಗಿ ₹14,490 ಜಮೆ ಆಗಿದೆ. ಅದರಲ್ಲಿ ಒಂದು ತಿಂಗಳ ಮೊಟ್ಟೆ ಹಣ ₹4,830 ಹಾಗೂ ನವೆಂಬರ್ ಮತ್ತು ಡಿಸೆಂಬರ್ ತಿಂಗಳಿಗೆ ತಲಾ ₹600ರಂತೆ ಒಟ್ಟು ₹1,200 ಸೇರಿದಂತೆ ಒಟ್ಟು ₹6,030 ಲಂಚ ನೀಡುವಂತೆ ಇಬ್ಬರೂ ಬೇಡಿಕೆ ಇಟ್ಟಿದ್ದರು’ ಎಂದು ಕಲಬುರಗಿಯ ಉದಯ ನಗರ ಅಂಗನವಾಡಿ ಕಾರ್ಯಕರ್ತೆ ಸೌಭಾಗ್ಯ ಬಲಭೀಮ ರಾಠೋಡ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.</p><p>ಅದರಂತೆ ಲೋಕಾಯುಕ್ತ ಎಸ್ಪಿ ಸಿದ್ಧರಾಜು ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸ್ಪೆಕ್ಟರ್–2 ರಾಜಶೇಖರ ಬಡದೆಸಾರ ನೇತೃತ್ವದ ತಂಡವು ಬುಧವಾರ ಆರೋಪಿಗಳು ₹6,030 ಲಂಚ ಪಡೆಯುತ್ತಿದ್ದ ವೇಳೆ ದಾಳಿ ನಡೆಸಿ ಬಂಧಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>