<p><strong>ಕಲಬುರಗಿ</strong>: ‘ಕಳೆದ 60 ವರ್ಷಗಳಿಂದ ಎಸ್ಎಸ್ಎಲ್ ಕಾನೂನು ಕಾಲೇಜು ಅತ್ಯುತ್ತಮ ಶಿಕ್ಷಣ ನೀಡುತ್ತಿದೆ. ಅನೇಕ ಸಾಧಕರನ್ನು ಹುಟ್ಟುಹಾಕಿದೆ. ಇಲ್ಲಿ ಕಲಿತವರು ವಕೀಲರು, ನ್ಯಾಯಾಧೀಶರು ಆಗಿದ್ದಾರೆ’ ಎಂದು ಕಲಬುರಗಿ ಹೈಕೋರ್ಟ್ ಪೀಠದ ಹೆಚ್ಚುವರಿ ರಿಜಿಸ್ಟ್ರಾರ್ ಜನರಲ್ ಬಸವರಾಜ ಚೇಂಗಟಿ ಹೇಳಿದರು.</p>.<p>ನಗರದ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಶೇಠ್ ಶಂಕರಲಾಲ್ ಲಾಹೋಟಿ ಕಾನೂನು ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಾರ್ಷಿಕೋತ್ಸವ ಮತ್ತು ಎಲ್.ಎಲ್.ಬಿ ಐದು ಮತ್ತು ಮೂರು ವರ್ಷಗಳ ಕಾನೂನು ಪದವಿಯ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ ಅವರು ಈ ಕಾಲೇಜಿನ ಪ್ರಾಂಶುಪಾಲರಾಗಿದ್ದರು. ಅವರ ಕೈನಲ್ಲಿ ಕಲಿತ ಅನೇಕರು ಇಂದು ದೊಡ್ಡ ದೊಡ್ಡ ಸ್ಥಾನದಲ್ಲಿದ್ದಾರೆ. ಸಾಧಕರ ಹಾದಿಯಲ್ಲಿ ನಾವು ಸಾಗಬೇಕಾಗಿದೆ’ ಎಂದರು.</p>.<p>ಹೈಕೋರ್ಟ್ ವಕೀಲ ಅಶೋಕ್ ಬಿ. ಮೂಲಗೆ ಮಾತನಾಡಿ, ‘ನಾನು ಇದೇ ಕಾಲೇಜಿನಲ್ಲಿ ಕಲಿತು ಇದೇ ಕಾಲೇಜಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವುದು ಖುಷಿ ತಂದಿದೆ. ವಕೀಲರು ಹಣಕ್ಕಾಗಿ ಕ್ಲೈಂಟ್ ಮತ್ತು ಕೇಸ್ಗಳನ್ನು ಕಳೆದುಕೊಳ್ಳಬಾರದು’ ಎಂದರು.</p>.<p>ಅಂತಿಮ ವರ್ಷದ ವಿದ್ಯಾರ್ಥಿಗಳಾದ ಗಣೇಶ್ ಪಾಟೀಲ, ಗಿರೀಶ್ ಸೇರಿದಂತೆ ಅನೇಕರು ಅನುಭವ ಹಂಚಿಕೊಂಡರು. ಈ ವೇಳೆ ವರ್ಷದ ಅತ್ಯುತ್ತಮ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿವಿಧ ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದವರಿಗೆ, ಎನ್.ಎಸ್.ಎಸ್ ಶಿಬಿರದಲ್ಲಿ ಪಾಲ್ಗೊಂಡವರಿಗೆ ಪ್ರಮಾಣ ಪತ್ರ ನೀಡಲಾಯಿತು.</p>.<p>ಎಚ್ಕೆಇ ಸಂಸ್ಥೆಯ ಉಪಾಧ್ಯಕ್ಷ ರಾಜ ಬಿ.ಭೀಮಳ್ಳಿ, ಕಾರ್ಯದರ್ಶಿ ಉದಯಕುಮಾರ್ ಚಿಂಚೋಳಿ, ಜಂಟಿ ಕಾರ್ಯದರ್ಶಿ ಕೈಲಾಸ್ ಬಿ.ಪಾಟೀಲ, ನಾಗಣ್ಣ ಗಂಟಿ, ಜ್ಯೋತಿ ಎಸ್.ಕಡಾದಿ, ಜ್ಯೋತಿ ಅಂಗರಕಿ, ಸವಿತಾ ಆರ್.ಗಿರಿ ಉಪಸ್ಥಿತರಿದ್ದರು.</p>.<p>ಭೂಮಿಕಾ ಮತ್ತು ಸಂಗಡಿಗರು ಸ್ವಾಗತ ಗೀತೆ ಹಾಡಿದರು. ಕಾಲೇಜಿನ ಪ್ರಾಂಶುಪಾಲ ಮಹೇಶ್ವರಿ ಎಸ್.ಹಿರೇಮಠ ಸ್ವಾಗತಿಸಿದರು. ಮೃಣಾಲಾ ಅತಿಥಿಗಳ ಪರಿಚಯ ಮಾಡಿದರು. ಶ್ರೇಯಾ ನಿರೂಪಿಸಿದರು. ಉಪನ್ಯಾಸಕಿ ಕರುಣಾ ಎಸ್.ಪಾಟೀಲ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ‘ಕಳೆದ 60 ವರ್ಷಗಳಿಂದ ಎಸ್ಎಸ್ಎಲ್ ಕಾನೂನು ಕಾಲೇಜು ಅತ್ಯುತ್ತಮ ಶಿಕ್ಷಣ ನೀಡುತ್ತಿದೆ. ಅನೇಕ ಸಾಧಕರನ್ನು ಹುಟ್ಟುಹಾಕಿದೆ. ಇಲ್ಲಿ ಕಲಿತವರು ವಕೀಲರು, ನ್ಯಾಯಾಧೀಶರು ಆಗಿದ್ದಾರೆ’ ಎಂದು ಕಲಬುರಗಿ ಹೈಕೋರ್ಟ್ ಪೀಠದ ಹೆಚ್ಚುವರಿ ರಿಜಿಸ್ಟ್ರಾರ್ ಜನರಲ್ ಬಸವರಾಜ ಚೇಂಗಟಿ ಹೇಳಿದರು.</p>.<p>ನಗರದ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಶೇಠ್ ಶಂಕರಲಾಲ್ ಲಾಹೋಟಿ ಕಾನೂನು ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಾರ್ಷಿಕೋತ್ಸವ ಮತ್ತು ಎಲ್.ಎಲ್.ಬಿ ಐದು ಮತ್ತು ಮೂರು ವರ್ಷಗಳ ಕಾನೂನು ಪದವಿಯ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ ಅವರು ಈ ಕಾಲೇಜಿನ ಪ್ರಾಂಶುಪಾಲರಾಗಿದ್ದರು. ಅವರ ಕೈನಲ್ಲಿ ಕಲಿತ ಅನೇಕರು ಇಂದು ದೊಡ್ಡ ದೊಡ್ಡ ಸ್ಥಾನದಲ್ಲಿದ್ದಾರೆ. ಸಾಧಕರ ಹಾದಿಯಲ್ಲಿ ನಾವು ಸಾಗಬೇಕಾಗಿದೆ’ ಎಂದರು.</p>.<p>ಹೈಕೋರ್ಟ್ ವಕೀಲ ಅಶೋಕ್ ಬಿ. ಮೂಲಗೆ ಮಾತನಾಡಿ, ‘ನಾನು ಇದೇ ಕಾಲೇಜಿನಲ್ಲಿ ಕಲಿತು ಇದೇ ಕಾಲೇಜಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವುದು ಖುಷಿ ತಂದಿದೆ. ವಕೀಲರು ಹಣಕ್ಕಾಗಿ ಕ್ಲೈಂಟ್ ಮತ್ತು ಕೇಸ್ಗಳನ್ನು ಕಳೆದುಕೊಳ್ಳಬಾರದು’ ಎಂದರು.</p>.<p>ಅಂತಿಮ ವರ್ಷದ ವಿದ್ಯಾರ್ಥಿಗಳಾದ ಗಣೇಶ್ ಪಾಟೀಲ, ಗಿರೀಶ್ ಸೇರಿದಂತೆ ಅನೇಕರು ಅನುಭವ ಹಂಚಿಕೊಂಡರು. ಈ ವೇಳೆ ವರ್ಷದ ಅತ್ಯುತ್ತಮ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿವಿಧ ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದವರಿಗೆ, ಎನ್.ಎಸ್.ಎಸ್ ಶಿಬಿರದಲ್ಲಿ ಪಾಲ್ಗೊಂಡವರಿಗೆ ಪ್ರಮಾಣ ಪತ್ರ ನೀಡಲಾಯಿತು.</p>.<p>ಎಚ್ಕೆಇ ಸಂಸ್ಥೆಯ ಉಪಾಧ್ಯಕ್ಷ ರಾಜ ಬಿ.ಭೀಮಳ್ಳಿ, ಕಾರ್ಯದರ್ಶಿ ಉದಯಕುಮಾರ್ ಚಿಂಚೋಳಿ, ಜಂಟಿ ಕಾರ್ಯದರ್ಶಿ ಕೈಲಾಸ್ ಬಿ.ಪಾಟೀಲ, ನಾಗಣ್ಣ ಗಂಟಿ, ಜ್ಯೋತಿ ಎಸ್.ಕಡಾದಿ, ಜ್ಯೋತಿ ಅಂಗರಕಿ, ಸವಿತಾ ಆರ್.ಗಿರಿ ಉಪಸ್ಥಿತರಿದ್ದರು.</p>.<p>ಭೂಮಿಕಾ ಮತ್ತು ಸಂಗಡಿಗರು ಸ್ವಾಗತ ಗೀತೆ ಹಾಡಿದರು. ಕಾಲೇಜಿನ ಪ್ರಾಂಶುಪಾಲ ಮಹೇಶ್ವರಿ ಎಸ್.ಹಿರೇಮಠ ಸ್ವಾಗತಿಸಿದರು. ಮೃಣಾಲಾ ಅತಿಥಿಗಳ ಪರಿಚಯ ಮಾಡಿದರು. ಶ್ರೇಯಾ ನಿರೂಪಿಸಿದರು. ಉಪನ್ಯಾಸಕಿ ಕರುಣಾ ಎಸ್.ಪಾಟೀಲ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>