‘ದೇಶದ ಅರ್ಥವ್ಯವಸ್ಥೆ ಅಧಃಪತನದ ಹಾದಿ ಹಿಡಿದಿದೆ. 7.5 ಲಕ್ಷ ಕೋಟಿ ಖೋತಾ ಬಜೆಟ್ ಎದುರಾಗಿದೆ. ಅದನ್ನು ಸರಿಪಡಿಸುವ ಯಾವುದೇ ಯೋಜನೆಗಳು ಸರ್ಕಾರದ ಬಳಿ ಇಲ್ಲ. ಜಿಡಪಿ 4.5 ಕ್ಕೆ ಇಳಿದಿದೆ. ಈರುಳ್ಳಿ, ಬೆಳ್ಳುಳ್ಳಿ, ಪ್ರೆಟ್ರೋಲ್ ದರ ಗಗನಕ್ಕೇರಿದೆ. ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದೆ. ಅಗ್ಗದ ದರಕ್ಕೆ ಸಾರ್ವಜನಿಕ ವಲಯದ ಉದ್ಯಮಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲಾಗುತ್ತಿದೆ. ಬ್ಯಾಂಕ್, ಎಲ್ಐಸಿಗಳಲ್ಲಿ ಖಾಸಗಿ ಷೇರುಗಳ ಪ್ರಮಾಣವನ್ನು ಹೆಚ್ಚಿಸಲಾಗುತ್ತಿದೆ. ತಮ್ಮ ಲೋಪಗಳನ್ನು ಮುಚ್ಚಿಡಲು ಜನರ ಗಮನವನ್ನು ಬೇರೆಡೆ ಸೆಳೆಯಲು ಕೀಳು ರಾಜಕೀಯ ತಂತ್ರಗಾರಿಕೆಯನ್ನು ಬಿಜೆಪಿ ಸರಕಾರ ಮಾಡುತ್ತಿದೆ’ ಎಂದು ಟೀಕಿಸಿದರು.