ಕಲಬುರಗಿ: ಎಪಿಎಂಸಿ ತಿದ್ದುಪಡಿ ಕಾಯ್ದೆಯಿಂದ ಎಪಿಎಂಸಿಗಳು ನಷ್ಟದಲ್ಲಿದ್ದು, ಶೀಘ್ರ ಎಲ್ಲ ಜಿಲ್ಲೆಗಳ ಎಪಿಎಂಸಿ ಕಾರ್ಯದರ್ಶಿಗಳ ಸಭೆ ಕರೆದು ಈ ಕಾಯ್ದೆ ರದ್ದುಗೊಳಿಸಿ, ಹಿಂದಿನ ಕಾಯ್ದೆ ಜಾರಿ ಮಾಡುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಕೈಮಗ್ಗ ಮತ್ತು ಜವಳಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದರು.