<p><strong>ಬೆಂಗಳೂರು:</strong>ಐತಿಹಾಸಿಕಕಲಬುರ್ಗಿ ಕೋಟೆಯ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿನ 282 ಒತ್ತುವರಿದಾರರು ಹಾಗೂ ಅಕ್ರಮ ವಾಸಿಗಳನ್ನು ತೆರವುಗೊಳಿಸಲು ಆದೇಶ ಹೊರಡಿಸಲಾಗಿದೆ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಹೈಕೋರ್ಟ್ಗೆ ತಿಳಿಸಿದೆ.</p>.<p>‘ನಮ್ಮ ಆದೇಶದ ಅನ್ವಯಜಿಲ್ಲಾಧಿಕಾರಿ ಮುಂದಿನ ಕ್ರಮ ಕೈಗೊಳ್ಳಬೇಕಾಗಿದೆ’ ಎಂದು ಪುರಾತತ್ವ ಸರ್ವೇಕ್ಷಣಾ ಇಲಾಖೆ ಹೈಕೋರ್ಟ್ಗೆ ಮಾಹಿತಿ ನೀಡಿದೆ.</p>.<p>‘ಘೋಷಿತ ಸ್ಮಾರಕ ಎನಿಸಿರುವ ಕಲಬುರ್ಗಿಯ ಐತಿಹಾಸಿಕ ಕೋಟೆ ಪ್ರದೇಶ ವ್ಯಾಪ್ತಿಯಲ್ಲಿನ ಒತ್ತುವರಿ ತೆರವುಗೊಳಿಸಲು ಕಲಬುರ್ಗಿ ಜಿಲ್ಲಾಧಿಕಾರಿ 15 ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಹೈಕೋರ್ಟ್ ಕಳೆದ ಡಿ.11ರಂದು ಆದೇಶಿಸಿತ್ತು.</p>.<p><strong>ಕೋಟೆಯೊಳಗಿನ ಅನಧಿಕೃತ ಕಟ್ಟಡ ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆ</strong></p>.<p><strong>ಕಲಬುರ್ಗಿ ವರದಿ:</strong> ನಗರದ ಐತಿಹಾಸಿಕ ಕೋಟೆಯ ಒಳಗೆ ಅನಧೊಕೃತವಾಗಿ ವಾಸವಾಗಿರುವ 282 ಕುಟುಂಬಗಳ ಕಟ್ಟಡಗಳನ್ನು ತೆರವುಗೊಳಿಸುವಂತೆ ಬೆಂಗಳೂರಿನ ರಾಜ್ಯ ಹೈಕೋರ್ಟ್ ಆದೇಶ ಹೊರಡಿಸಿದೆ. ಹೀಗಾಗಿ ಕೋಟೆಯ ಒಳಗೆ ಅನಧಿಕೃತವಾಗಿ ವಾಸವಾಗಿರುವ ಎಲ್ಲ ಕುಟುಂಬಗಳು ಸ್ವಯಂ ಪ್ರೇರಿತವಾಗಿ ತಮ್ಮ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಿ, ಆ ಸ್ಥಳವನ್ನು ಖಾಲಿ ಮಾಡುವಂತೆ ಜಿಲ್ಲಾಧಿಕಾರಿ ಶರತ್ ಬಿ. ಅವರು ನಿವಾಸಿಗಳು ಸೂಚನೆ ನೀಡಿದ್ದಾರೆ. </p>.<p>ಖಾಲಿ ಮಾಡದೇ ಇದ್ದಲ್ಲಿ ಜಿಲ್ಲಾಡಳಿತದಿಂದ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಿ ಅದಕ್ಕೆ ತಗಲುವ ವೆಚ್ಚವನ್ನು ಕಟ್ಟಡಗಳ ಮಾಲೀಕರಿಂದಲೇ ವಸೂಲಿ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.</p>.<p><strong>ಹಿನ್ನೆಲೆ</strong></p>.<p>ಕೋಟೆಯೊಳಗಿನ ‘ಒತ್ತುವರಿದಾರರನ್ನು ತೆರವುಗೊಳಿಸಬೇಕು’ ಎಂದು ಕೋರಿ ಎಂ.ಎಸ್.ಶರಣ್ ದೇಸಾಯಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ್ದನ್ಯಾಯಮೂರ್ತಿ ರವಿ ಹಾಗೂ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ವಿಭಾಗೀಯ ನ್ಯಾಯಪೀಠ, ತೆರವು ಕಾರ್ಯಾಚರಣೆ ನಡೆಸುವಂತೆ ಜಿಲ್ಲಾಧಿಕಾರಿಗೆ ಆದೇಶಿಸಿ ವಿಚಾರಣೆಯನ್ನು ಮುಂದೂಡಿತ್ತು.</p>.<p>ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರ ಹಾಜರಿದ್ದ ಸಹಾಯಕ ಸಾಲಿಸಿಟರ್ ಜನರಲ್ ಸಿ.ಶಶಿಕಾಂತ್, ‘ಒತ್ತುವರಿ ತೆರವುಗೊಳಿಸಲು ಸರ್ವೇಕ್ಷಣಾ ಮತ್ತು ಪುರಾತತ್ವ ಇಲಾಖೆ ಈಗಾಗಲೇ ನೋಟಿಸ್ ನೀಡಿದೆ. ನೋಟಿಸ್ ಅನ್ವಯ ಹದಿನೈದು ದಿನಗಳಲ್ಲಿ ತೆರವುಗೊಳಿಸಬೇಕು ಎಂದು ತಿಳಿಸಿತ್ತು. ಆದರೆ, ಇನ್ನೂ ತೆರವುಗೊಳಿಸಿಲ್ಲ’ಎಂದು ವಿವರಿಸಿದರು.</p>.<p><strong>ಆಕ್ಷೇಪಣೆ ಏನು?:</strong>‘ಮಾಹಿತಿ ಹಕ್ಕು ಕಾಯ್ದೆ ಅಡಿ 2011ರಲ್ಲಿ ಪಡೆದುಕೊಂಡಿರುವ ಮಾಹಿತಿಯಂತೆ ಕಲಬುರ್ಗಿ ಕೋಟೆಯ ಒಳಗೆ ಮತ್ತು ಹೊರಗೆ 194 ಕುಟುಂಬಗಳು ಜಮೀನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ನೆಲೆಸಿವೆ. ಈ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಪ್ರಾಚ್ಯವಸ್ತು ಸಂಗ್ರಹಾಲಯ ಇಲಾಖೆ ಅಥವಾ ಸ್ಥಳೀಯ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂಬುದು ಅರ್ಜಿದಾರರ ಆಕ್ಷೇಪವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಐತಿಹಾಸಿಕಕಲಬುರ್ಗಿ ಕೋಟೆಯ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿನ 282 ಒತ್ತುವರಿದಾರರು ಹಾಗೂ ಅಕ್ರಮ ವಾಸಿಗಳನ್ನು ತೆರವುಗೊಳಿಸಲು ಆದೇಶ ಹೊರಡಿಸಲಾಗಿದೆ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಹೈಕೋರ್ಟ್ಗೆ ತಿಳಿಸಿದೆ.</p>.<p>‘ನಮ್ಮ ಆದೇಶದ ಅನ್ವಯಜಿಲ್ಲಾಧಿಕಾರಿ ಮುಂದಿನ ಕ್ರಮ ಕೈಗೊಳ್ಳಬೇಕಾಗಿದೆ’ ಎಂದು ಪುರಾತತ್ವ ಸರ್ವೇಕ್ಷಣಾ ಇಲಾಖೆ ಹೈಕೋರ್ಟ್ಗೆ ಮಾಹಿತಿ ನೀಡಿದೆ.</p>.<p>‘ಘೋಷಿತ ಸ್ಮಾರಕ ಎನಿಸಿರುವ ಕಲಬುರ್ಗಿಯ ಐತಿಹಾಸಿಕ ಕೋಟೆ ಪ್ರದೇಶ ವ್ಯಾಪ್ತಿಯಲ್ಲಿನ ಒತ್ತುವರಿ ತೆರವುಗೊಳಿಸಲು ಕಲಬುರ್ಗಿ ಜಿಲ್ಲಾಧಿಕಾರಿ 15 ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಹೈಕೋರ್ಟ್ ಕಳೆದ ಡಿ.11ರಂದು ಆದೇಶಿಸಿತ್ತು.</p>.<p><strong>ಕೋಟೆಯೊಳಗಿನ ಅನಧಿಕೃತ ಕಟ್ಟಡ ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆ</strong></p>.<p><strong>ಕಲಬುರ್ಗಿ ವರದಿ:</strong> ನಗರದ ಐತಿಹಾಸಿಕ ಕೋಟೆಯ ಒಳಗೆ ಅನಧೊಕೃತವಾಗಿ ವಾಸವಾಗಿರುವ 282 ಕುಟುಂಬಗಳ ಕಟ್ಟಡಗಳನ್ನು ತೆರವುಗೊಳಿಸುವಂತೆ ಬೆಂಗಳೂರಿನ ರಾಜ್ಯ ಹೈಕೋರ್ಟ್ ಆದೇಶ ಹೊರಡಿಸಿದೆ. ಹೀಗಾಗಿ ಕೋಟೆಯ ಒಳಗೆ ಅನಧಿಕೃತವಾಗಿ ವಾಸವಾಗಿರುವ ಎಲ್ಲ ಕುಟುಂಬಗಳು ಸ್ವಯಂ ಪ್ರೇರಿತವಾಗಿ ತಮ್ಮ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಿ, ಆ ಸ್ಥಳವನ್ನು ಖಾಲಿ ಮಾಡುವಂತೆ ಜಿಲ್ಲಾಧಿಕಾರಿ ಶರತ್ ಬಿ. ಅವರು ನಿವಾಸಿಗಳು ಸೂಚನೆ ನೀಡಿದ್ದಾರೆ. </p>.<p>ಖಾಲಿ ಮಾಡದೇ ಇದ್ದಲ್ಲಿ ಜಿಲ್ಲಾಡಳಿತದಿಂದ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಿ ಅದಕ್ಕೆ ತಗಲುವ ವೆಚ್ಚವನ್ನು ಕಟ್ಟಡಗಳ ಮಾಲೀಕರಿಂದಲೇ ವಸೂಲಿ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.</p>.<p><strong>ಹಿನ್ನೆಲೆ</strong></p>.<p>ಕೋಟೆಯೊಳಗಿನ ‘ಒತ್ತುವರಿದಾರರನ್ನು ತೆರವುಗೊಳಿಸಬೇಕು’ ಎಂದು ಕೋರಿ ಎಂ.ಎಸ್.ಶರಣ್ ದೇಸಾಯಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ್ದನ್ಯಾಯಮೂರ್ತಿ ರವಿ ಹಾಗೂ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ವಿಭಾಗೀಯ ನ್ಯಾಯಪೀಠ, ತೆರವು ಕಾರ್ಯಾಚರಣೆ ನಡೆಸುವಂತೆ ಜಿಲ್ಲಾಧಿಕಾರಿಗೆ ಆದೇಶಿಸಿ ವಿಚಾರಣೆಯನ್ನು ಮುಂದೂಡಿತ್ತು.</p>.<p>ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರ ಹಾಜರಿದ್ದ ಸಹಾಯಕ ಸಾಲಿಸಿಟರ್ ಜನರಲ್ ಸಿ.ಶಶಿಕಾಂತ್, ‘ಒತ್ತುವರಿ ತೆರವುಗೊಳಿಸಲು ಸರ್ವೇಕ್ಷಣಾ ಮತ್ತು ಪುರಾತತ್ವ ಇಲಾಖೆ ಈಗಾಗಲೇ ನೋಟಿಸ್ ನೀಡಿದೆ. ನೋಟಿಸ್ ಅನ್ವಯ ಹದಿನೈದು ದಿನಗಳಲ್ಲಿ ತೆರವುಗೊಳಿಸಬೇಕು ಎಂದು ತಿಳಿಸಿತ್ತು. ಆದರೆ, ಇನ್ನೂ ತೆರವುಗೊಳಿಸಿಲ್ಲ’ಎಂದು ವಿವರಿಸಿದರು.</p>.<p><strong>ಆಕ್ಷೇಪಣೆ ಏನು?:</strong>‘ಮಾಹಿತಿ ಹಕ್ಕು ಕಾಯ್ದೆ ಅಡಿ 2011ರಲ್ಲಿ ಪಡೆದುಕೊಂಡಿರುವ ಮಾಹಿತಿಯಂತೆ ಕಲಬುರ್ಗಿ ಕೋಟೆಯ ಒಳಗೆ ಮತ್ತು ಹೊರಗೆ 194 ಕುಟುಂಬಗಳು ಜಮೀನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ನೆಲೆಸಿವೆ. ಈ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಪ್ರಾಚ್ಯವಸ್ತು ಸಂಗ್ರಹಾಲಯ ಇಲಾಖೆ ಅಥವಾ ಸ್ಥಳೀಯ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂಬುದು ಅರ್ಜಿದಾರರ ಆಕ್ಷೇಪವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>