<p><strong>ಚಿಂಚೋಳಿ (ಕಲಬುರಗಿ): ‘</strong>ಬಿಜೆಪಿ ಪಕ್ಷದ ನಾಯಕರ ವಿರುದ್ಧ ಹಲವರು ಬಾಯಿ ಹರಿಬಿಟ್ಟರೂ ಹೈಕಮಾಂಡ್ ಸುಮ್ಮನಾಗಿದ್ದೇಕೆ? ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ ಉತ್ತರಿಸದೇ ತೆರಳಿದರು.</p><p>ಭಾನುವಾರ ಶಾಸಕ ಡಾ.ಅವಿನಾಶ ಜಾಧವ ಅವರ ಮನೆಯಲ್ಲಿ ಅವರು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಲಿಲ್ಲ. ಬದಲಾಗಿ ಜಾರಿಕೊಂಡರು.</p><p>‘ಬಿಜೆಪಿಗೆ ಕಾವೇರಿ ವಿಚಾರದಲ್ಲಿ ಇರುವ ಕಾಳಜಿ ಭೀಮಾ, ಕೃಷ್ಣೆಗೇಕಿಲ್ಲ? ಎಂದಾಗಲೂ ಅವರು ಹಾಗೇನಿಲ್ಲ‘ ಎಂದು ಹೇಳುತ್ತಲೇ ಇಂಡಿಯಾ ಕೂಟದ ಪ್ರಣಾಳಿಕೆ ಉದಾಹರಿಸಿ ಕೈತೊಳೆದುಕೊಂಡರು. ಸ್ಪಷ್ಟ ಉತ್ತರ ನೀಡಲಿಲ್ಲ.</p><p>‘ಕೋಲಾರ ಸಂಸದ ಮುನಿಸ್ವಾಮಿ, ಮಂಡ್ಯ ಸಂಸದೆ ಸುಮಲತಾ ಅವರನ್ನು ಬಿಜೆಪಿ ಕೈಬಿಡುವುದಿಲ್ಲ. ಅವರನ್ನು ಪಕ್ಷ ಉಳಿಸಿಕೊಳ್ಳುವುದರ ಜತೆಗೆ ಸೂಕ್ತ ಸ್ಥಾನಮಾನ ನೀಡಲಿದೆ’ ಎಂದರು.</p><p>‘ರಾಜ್ಯದಲ್ಲಿ 28 ಸ್ಥಾನ ಗೆಲ್ಲು ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಇಂತಹ ಸಂದರ್ಭದಲ್ಲಿ ಕೆಲವೊಮ್ಮೆ ಎಲ್ಲರಿಗೂ ಸ್ಥಾನ ಸಿಗುವುದಿಲ್ಲ. ಆದರೆ ಮುಂದಿನ ದಿನಗಳಲ್ಲಿ ಈ ಇಬ್ಬರನ್ನೂ ಪಕ್ಷ ಗೌರವಯುತವಾಗಿ ನಡೆಸಿಕೊಂಡು ಸ್ಥಾನಮಾನ ನೀಡಲಿದೆ’ ಎಂದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂಚೋಳಿ (ಕಲಬುರಗಿ): ‘</strong>ಬಿಜೆಪಿ ಪಕ್ಷದ ನಾಯಕರ ವಿರುದ್ಧ ಹಲವರು ಬಾಯಿ ಹರಿಬಿಟ್ಟರೂ ಹೈಕಮಾಂಡ್ ಸುಮ್ಮನಾಗಿದ್ದೇಕೆ? ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ ಉತ್ತರಿಸದೇ ತೆರಳಿದರು.</p><p>ಭಾನುವಾರ ಶಾಸಕ ಡಾ.ಅವಿನಾಶ ಜಾಧವ ಅವರ ಮನೆಯಲ್ಲಿ ಅವರು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಲಿಲ್ಲ. ಬದಲಾಗಿ ಜಾರಿಕೊಂಡರು.</p><p>‘ಬಿಜೆಪಿಗೆ ಕಾವೇರಿ ವಿಚಾರದಲ್ಲಿ ಇರುವ ಕಾಳಜಿ ಭೀಮಾ, ಕೃಷ್ಣೆಗೇಕಿಲ್ಲ? ಎಂದಾಗಲೂ ಅವರು ಹಾಗೇನಿಲ್ಲ‘ ಎಂದು ಹೇಳುತ್ತಲೇ ಇಂಡಿಯಾ ಕೂಟದ ಪ್ರಣಾಳಿಕೆ ಉದಾಹರಿಸಿ ಕೈತೊಳೆದುಕೊಂಡರು. ಸ್ಪಷ್ಟ ಉತ್ತರ ನೀಡಲಿಲ್ಲ.</p><p>‘ಕೋಲಾರ ಸಂಸದ ಮುನಿಸ್ವಾಮಿ, ಮಂಡ್ಯ ಸಂಸದೆ ಸುಮಲತಾ ಅವರನ್ನು ಬಿಜೆಪಿ ಕೈಬಿಡುವುದಿಲ್ಲ. ಅವರನ್ನು ಪಕ್ಷ ಉಳಿಸಿಕೊಳ್ಳುವುದರ ಜತೆಗೆ ಸೂಕ್ತ ಸ್ಥಾನಮಾನ ನೀಡಲಿದೆ’ ಎಂದರು.</p><p>‘ರಾಜ್ಯದಲ್ಲಿ 28 ಸ್ಥಾನ ಗೆಲ್ಲು ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಇಂತಹ ಸಂದರ್ಭದಲ್ಲಿ ಕೆಲವೊಮ್ಮೆ ಎಲ್ಲರಿಗೂ ಸ್ಥಾನ ಸಿಗುವುದಿಲ್ಲ. ಆದರೆ ಮುಂದಿನ ದಿನಗಳಲ್ಲಿ ಈ ಇಬ್ಬರನ್ನೂ ಪಕ್ಷ ಗೌರವಯುತವಾಗಿ ನಡೆಸಿಕೊಂಡು ಸ್ಥಾನಮಾನ ನೀಡಲಿದೆ’ ಎಂದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>