<p><strong>ಕಲಬುರ್ಗಿ: </strong>ನಿವೃತ್ತಿ ಅಂಚಿನಲ್ಲಿದ್ದ ನಗರದ ಚೌಕ್ ಪೊಲೀಸ್ ಠಾಣೆಯ ಎಎಸ್ಐ ಮಲ್ಲಿಕಾರ್ಜುನ ಪಂಚಕಟ್ಟಿ (59) ಅವರು ಕೊರೊನಾ ಸೋಂಕಿನಿಂದ ಶನಿವಾರ ನಗರದ ಯುನೈಟೆಡ್ ಆಸ್ಪತ್ರೆಯಲ್ಲಿ ಮೃತಪಟ್ಟರು.</p>.<p>ಐದು ದಿನಗಳ ಹಿಂದೆ ಅವರಿಗೆ ಸೋಂಕು ತಗುಲಿತ್ತು. ಅವರು ಆಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ಮಧ್ಯಾಹ್ನ 12.30ರ ಸುಮಾರಿಗೆ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದರು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.</p>.<p>ಮಲ್ಲಿಕಾರ್ಜುನ ಅವರು ಇದೇ ಜೂನ್ ತಿಂಗಳಲ್ಲಿ ನಿವೃತ್ತಿ ಹೊಂದುವವರಿದ್ದರು. ಮಾರ್ಚ್ ಆರಂಭದಿಂದಲೂ ಅವರು ಕೊರೊನಾ ಫ್ರಂಟ್ಲೈನ್ ವಾರಿಯರ್ ಆಗಿ ಕೆಲಸದಲ್ಲಿ ತೊಡಗಿದ್ದರು. ಕಳೆದ ವರ್ಷ ಕೊರೊನಾ ಸಂಕೀರ್ಣ ಸ್ಥಿತಿ ತಲುಪಿದ ವೇಳೆ ಅವರು ಅತ್ಯುತ್ತಮವಾಗಿ ಸೇವೆ ಸಲ್ಲಿಸಿ, ಪ್ರಶಂಸೆಗೆ ಪಾತ್ರವಾಗಿದ್ದರು ಎಂದು ಠಾಣೆಯ ಹಿರಿಯ ಅಧಿಕಾರಿಗಳು ಸ್ಮರಿಸಿದರು.</p>.<p>ಇದರೊಂದಿಗೆ ಒಂದೇ ವಾರದಲ್ಲಿ ಪೊಲೀಸ್ ಇಲಾಖೆಯ ಮೂವರು ಸಾವನ್ನಪ್ಪಿದಂತಾಗಿದೆ.</p>.<p>ವಾರದ ಹಿಂದಷ್ಟೇ ರೋಜಾ ಎಎಸ್ಐ ಹಾಗೂ ಶುಕ್ರವಾರ ಅಶೋಕ ನಗರ ಠಾಣೆಯ ಕಾನ್ಸ್ಟೆಬಲ್ ಕೂಡ ಕೊರೊನಾ ಕಾರನದಿಂದ ಸಾವನ್ನಪ್ಪಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ನಿವೃತ್ತಿ ಅಂಚಿನಲ್ಲಿದ್ದ ನಗರದ ಚೌಕ್ ಪೊಲೀಸ್ ಠಾಣೆಯ ಎಎಸ್ಐ ಮಲ್ಲಿಕಾರ್ಜುನ ಪಂಚಕಟ್ಟಿ (59) ಅವರು ಕೊರೊನಾ ಸೋಂಕಿನಿಂದ ಶನಿವಾರ ನಗರದ ಯುನೈಟೆಡ್ ಆಸ್ಪತ್ರೆಯಲ್ಲಿ ಮೃತಪಟ್ಟರು.</p>.<p>ಐದು ದಿನಗಳ ಹಿಂದೆ ಅವರಿಗೆ ಸೋಂಕು ತಗುಲಿತ್ತು. ಅವರು ಆಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ಮಧ್ಯಾಹ್ನ 12.30ರ ಸುಮಾರಿಗೆ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದರು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.</p>.<p>ಮಲ್ಲಿಕಾರ್ಜುನ ಅವರು ಇದೇ ಜೂನ್ ತಿಂಗಳಲ್ಲಿ ನಿವೃತ್ತಿ ಹೊಂದುವವರಿದ್ದರು. ಮಾರ್ಚ್ ಆರಂಭದಿಂದಲೂ ಅವರು ಕೊರೊನಾ ಫ್ರಂಟ್ಲೈನ್ ವಾರಿಯರ್ ಆಗಿ ಕೆಲಸದಲ್ಲಿ ತೊಡಗಿದ್ದರು. ಕಳೆದ ವರ್ಷ ಕೊರೊನಾ ಸಂಕೀರ್ಣ ಸ್ಥಿತಿ ತಲುಪಿದ ವೇಳೆ ಅವರು ಅತ್ಯುತ್ತಮವಾಗಿ ಸೇವೆ ಸಲ್ಲಿಸಿ, ಪ್ರಶಂಸೆಗೆ ಪಾತ್ರವಾಗಿದ್ದರು ಎಂದು ಠಾಣೆಯ ಹಿರಿಯ ಅಧಿಕಾರಿಗಳು ಸ್ಮರಿಸಿದರು.</p>.<p>ಇದರೊಂದಿಗೆ ಒಂದೇ ವಾರದಲ್ಲಿ ಪೊಲೀಸ್ ಇಲಾಖೆಯ ಮೂವರು ಸಾವನ್ನಪ್ಪಿದಂತಾಗಿದೆ.</p>.<p>ವಾರದ ಹಿಂದಷ್ಟೇ ರೋಜಾ ಎಎಸ್ಐ ಹಾಗೂ ಶುಕ್ರವಾರ ಅಶೋಕ ನಗರ ಠಾಣೆಯ ಕಾನ್ಸ್ಟೆಬಲ್ ಕೂಡ ಕೊರೊನಾ ಕಾರನದಿಂದ ಸಾವನ್ನಪ್ಪಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>