<p><strong>ಕಲಬುರ್ಗಿ:</strong> ಇತ್ತೀಚೆಗೆ ನಡೆದ ಸಾರಿಗೆ ಸಿಬ್ಬಂದಿ ಮುಷ್ಕರದ ಸಂದರ್ಭದಲ್ಲಿ ಕರ್ತವ್ಯ ನಿರತ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ, ಬಸ್ಗಳನ್ನು ಜಖಂಗೊಳಿಸಿದ ಆರೋಪದ ಮೇರೆಗೆ 9 ಸಿಬ್ಬಂದಿಯನ್ನು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಎಂ. ಕೂರ್ಮರಾವ್ ಸೇವೆಯಿಂದ ಅಮಾನತುಗೊಳಿಸಿದ್ದಾರೆ.</p>.<p>ಸಂಸ್ಥೆಯ ಬೀದರ್ ವಿಭಾಗದ ಐವರು, ಕೊಪ್ಪಳ ವಿಭಾಗದ ಇಬ್ಬರು, ಬಳ್ಳಾರಿ ಹಾಗೂ ವಿಜಯಪುರ ವಿಭಾಗದ ತಲಾ ಒಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದು ಕೂರ್ಮರಾವ್ ತಿಳಿಸಿದ್ದಾರೆ.</p>.<p>‘ಮುಷ್ಕರದಲ್ಲಿ ಭಾಗವಹಿಸಿದವರ ವಿರುದ್ಧ ಕ್ರಮ ಕೈಗೊಂಡಿಲ್ಲ. ಅಮಾನತಾದ ಕೆಲ ಸಿಬ್ಬಂದಿ ಮೇಲೆ ಎಫ್ಐಆರ್ ಸಹ ದಾಖಲಾಗಿದೆ. ಹಾಗಾಗಿ ಶಿಸ್ತು ಕ್ರಮ ಕೈಗೊಳ್ಳಲಾಗಿದೆ’ ಎಂದು ಸ್ಪಷ್ಟಪಡಿಸಿದ್ದಾರೆ.</p>.<p>ಮುಷ್ಕರ ನಡೆದ ನಾಲ್ಕು ದಿನಗಳ ವೇತನವನ್ನು ಕಡಿತ ಮಾಡುವ ಬಗ್ಗೆ ಯಾವ ನಿರ್ಧಾರವನ್ನೂ ಕೈಗೊಂಡಿಲ್ಲ. ಈ ತೀರ್ಮಾನವನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸಿದ ಬಳಿಕ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.</p>.<p>ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು. ಅಧಿಕಾರಿಗಳು ಸಿಬ್ಬಂದಿ ಮೇಲೆ ನಡೆಸುತ್ತಿರುವ ಶೋಷಣೆಯನ್ನು ತಡೆಗಟ್ಟಬೇಕು ಎಂಬುದು ಸೇರಿದಂತೆ 10 ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ನೌಕರರು ಇತ್ತೀಚೆಗೆ ಬಸ್ ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ಇತ್ತೀಚೆಗೆ ನಡೆದ ಸಾರಿಗೆ ಸಿಬ್ಬಂದಿ ಮುಷ್ಕರದ ಸಂದರ್ಭದಲ್ಲಿ ಕರ್ತವ್ಯ ನಿರತ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ, ಬಸ್ಗಳನ್ನು ಜಖಂಗೊಳಿಸಿದ ಆರೋಪದ ಮೇರೆಗೆ 9 ಸಿಬ್ಬಂದಿಯನ್ನು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಎಂ. ಕೂರ್ಮರಾವ್ ಸೇವೆಯಿಂದ ಅಮಾನತುಗೊಳಿಸಿದ್ದಾರೆ.</p>.<p>ಸಂಸ್ಥೆಯ ಬೀದರ್ ವಿಭಾಗದ ಐವರು, ಕೊಪ್ಪಳ ವಿಭಾಗದ ಇಬ್ಬರು, ಬಳ್ಳಾರಿ ಹಾಗೂ ವಿಜಯಪುರ ವಿಭಾಗದ ತಲಾ ಒಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದು ಕೂರ್ಮರಾವ್ ತಿಳಿಸಿದ್ದಾರೆ.</p>.<p>‘ಮುಷ್ಕರದಲ್ಲಿ ಭಾಗವಹಿಸಿದವರ ವಿರುದ್ಧ ಕ್ರಮ ಕೈಗೊಂಡಿಲ್ಲ. ಅಮಾನತಾದ ಕೆಲ ಸಿಬ್ಬಂದಿ ಮೇಲೆ ಎಫ್ಐಆರ್ ಸಹ ದಾಖಲಾಗಿದೆ. ಹಾಗಾಗಿ ಶಿಸ್ತು ಕ್ರಮ ಕೈಗೊಳ್ಳಲಾಗಿದೆ’ ಎಂದು ಸ್ಪಷ್ಟಪಡಿಸಿದ್ದಾರೆ.</p>.<p>ಮುಷ್ಕರ ನಡೆದ ನಾಲ್ಕು ದಿನಗಳ ವೇತನವನ್ನು ಕಡಿತ ಮಾಡುವ ಬಗ್ಗೆ ಯಾವ ನಿರ್ಧಾರವನ್ನೂ ಕೈಗೊಂಡಿಲ್ಲ. ಈ ತೀರ್ಮಾನವನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸಿದ ಬಳಿಕ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.</p>.<p>ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು. ಅಧಿಕಾರಿಗಳು ಸಿಬ್ಬಂದಿ ಮೇಲೆ ನಡೆಸುತ್ತಿರುವ ಶೋಷಣೆಯನ್ನು ತಡೆಗಟ್ಟಬೇಕು ಎಂಬುದು ಸೇರಿದಂತೆ 10 ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ನೌಕರರು ಇತ್ತೀಚೆಗೆ ಬಸ್ ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>