ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಶಿಷ್ಟ ವ್ಯಕ್ತಿ ಮೇಲೆ ಹಲ್ಲೆ; 6 ಜನರ ವಿರುದ್ಧ ಪ್ರಕರಣ

Last Updated 1 ಡಿಸೆಂಬರ್ 2022, 16:29 IST
ಅಕ್ಷರ ಗಾತ್ರ

ಯಡ್ರಾಮಿ: ತಾಲ್ಲೂಕಿನ ಕಡಕೋಳ ಗ್ರಾಮದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ಜಾಗ ಸ್ವಚ್ಚಗೊಳ್ಳಿಸಲು ತೆರಳಿದ ವೇಳೆ ಜಾತಿ ನಿಂದನೆಯ ಅವಾಚ್ಯ ಶಬ್ದದಿಂದ ಬೈದು ಹಲ್ಲೆ ಮಾಡಿದ ಆರೋಪದ ಮೇರೆಗೆ ಮರೆಪ್ಪ ಮಡಿವಾಳಪ್ಪ ಹೊಸಮನಿ ಎಂಬುವವರು ಪಂಚಾಯತರಾಜ್ ಎಂಜಿನಿಯರಿಂಗ್ ವಿಭಾಗದ ಕಿರಿಯ ಎಂಜಿನಿಯರ್ ಸಿದ್ದಪ್ಪ ದೊಡ್ಡಮನಿ ಸೇರಿದಂತೆ ಐವರ ವಿರುದ್ಧ ಜಾತಿ ನಿಂದನೆ ಕಾಯ್ದೆ ಸೇರಿದಂತೆ ವಿವಿಧ ಕಲಂಗಳಡಿ ಯಡ್ರಾಮಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಿಪ್ಪಣ್ಣಗೌಡ ಸಿದ್ದಪ್ಪಗೌಡ ಕಡಕೋಳ, ವೀರೇಶ ತಿಪ್ಪಣ್ಣಗೌಡ ಕಡಕೋಳ, ಮಹಾಂತೇಶ ತಿಪ್ಪಣ್ಣ ಕಡಕೋಳ, ಮಡಿವಾಳಪ್ಪ ತಿಪ್ಪಣ್ಣ ಕಡಕೋಳ, ವಸುಂದರಬಾಯಿ ತಿಪ್ಪಣ್ಣಗೌಡ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣದ ಪ್ರಯುಕ್ತ ಡಿವೈಎಸ್ಪಿ ಅವರು ಸ್ಥಳಕ್ಕೆ ಭೇಟಿ ನೀಡಿ ಪಂಚನಾಮೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT