ರೈಲ್ವೆ ನಿಲ್ದಾಣದಲ್ಲಿ ಹೌಸ್ ಕೀಪಿಂಗ್ ಮೇಲ್ವಿಚಾರಣೆಯ ಕೆಲಸ ಮುಗಿಸಿ ಆರ್ಟಿಒ ಕಚೇರಿ ಬಳಿಯ ಜಗಜೀವನರಾಂ ನಗರದ ಮನೆಗೆ ಬೈಕ್ನಲ್ಲಿ ತೆರಳುತ್ತಿದ್ದರು. ಇವರನ್ನೇ ಕಾಯುತ್ತಿದ್ದ ಇಬ್ಬರು ಯುವಕರ ತಂಡ ಬೈಕ್ನಲ್ಲಿ ಬಸವರಾಜ ತೆರಳುವಾಗಲೇ ಮಾರಕಾಸ್ತ್ರಗಳಿಂದ ಮುಖಕ್ಕೆ ಹೊಡೆದರು. ಹೊಡೆದ ಏಟಿಗೆ ಬೈಕ್ ಸುಮಾರು 15 ಅಡಿ ಮುಂದಕ್ಕೆ ಹೋಗಿ ಬಿದ್ದರೆ, ಬಸವರಾಜ ಎಸಿಬಿ ಕಚೇರಿಯ ಎದುರಿನ ರಸ್ತೆಯ ಮೇಲೆ ಬಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.