ಕಲಬುರ್ಗಿ: ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಸೇಡಂನಲ್ಲಿ ಭಾನುವಾರ ಭಾಗವಹಿಸಿದ್ದ ಇಲಾಖೆಯ ಕಾರ್ಯಕ್ರಮಕ್ಕೆ ಗೈರಾಗುವ ಮೂಲಕ ಕರ್ತವ್ಯ ಲೋಪ ಎಸಗಿದ ಕಾರಣಕ್ಕಾಗಿ ಇಲಾಖೆಯ ಸೇಡಂ ತಾಲ್ಲೂಕಿನ ಸಹಾಯಕ ನಿರ್ದೇಶಕ (ಗ್ರೇಡ್–2) ಶಶಿಕಾಂತ ನಂದಿಕೂರ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಇಲಾಖೆ ಆಯುಕ್ತ ಹಾಗೂ ಶಿಸ್ತು ಪ್ರಾಧಿಕಾರದ ಮುಖ್ಯಸ್ಥ ಡಾ. ರವಿಕುಮಾರ ಸುರಪುರ ಆದೇಶ ಹೊರಡಿಸಿದ್ದಾರೆ.