‘ರಾಜ್ಯದಲ್ಲಿ ಎರಡನೇ ಬಾರಿಗೆ ಅಬ್ಬೆತುಮಕೂರಿನಲ್ಲಿ ಅತಿರುದ್ರಯಾಗ ನಡೆಯುತ್ತಿದೆ. ಇದರಲ್ಲಿ ಪಾಲ್ಗೊಳ್ಳಲು ಯಾದಗಿರಿ, ಕಲಬುರಗಿ, ರಾಯಚೂರು, ಕೊಪ್ಪಳ ಸೇರಿದಂತೆ ನೆರೆಯ ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶದಿಂದಲೂ ಸಾವಿರಾರು ಭಕ್ತರು ಬರುವರು. ಭಕ್ತರಿಗೆ ತಂಗಲು ವಸತಿ ವ್ಯವಸ್ಥೆ, ಸ್ನಾನ ಗೃಹಗಳು, ಶೌಚಾಲಯದ ವ್ಯವಸ್ಥೆಯೂ ಮಾಡಲಾಗಿದೆ’ ಎಂದು ಸ್ವಾಮೀಜಿ ಮಾಹಿತಿ ನೀಡಿದರು.