‘ಬಸವ ವಸತಿ ಯೋಜನೆಯಲ್ಲಿ ಮನೆ ಕಟ್ಟದೇ ನೆರವಿನ ಹಣ ದುರುಪಯೋಗ ಮಾಡಿಕೊಂಡಿದ್ದಾರೆ. ಅಲ್ಲದೇ, ತಮ್ಮ ಸಂಬಂಧಿಕರಾದ ಒಂದೇ ಕುಟುಂಬದ 7 ಮಂದಿಗೆ ಮನೆ ಮಂಜೂರಾಗುವಂತೆ ಮಾಡಿ ಹಣ ಬಳಸಿಕೊಂಡಿದ್ದಾರೆ. ಇನ್ನೊಂದು ಪ್ರಕರಣದಲ್ಲಿ, ಒಬ್ಬರಿಗೇ ಎರಡು ಬಾರಿ ಮನೆ ಹಂಚಿಕೆ ಮಾಡಿ ಖೊಟ್ಟಿ ದಾಖಲೆ ಸೃಷ್ಟಿಸಿ ಅಕ್ರಮ ಎಸಗಿದ್ದಾರೆ. ಇದಕ್ಕೆ ಗ್ರಾಮದ ಪಿಡಿಒ ಕೂಡ ಸಹಕಾರ ನೀಡಿದ್ದಾರೆ. ಫಲಾನುಭವಿಗಳ ಆಯ್ಕೆಗೆ ಗ್ರಾಮಸಭೆ ಕೂಡ ನಡೆಸಿಲ್ಲ’ ಎಂದು ಅವರು ದೂರಿದರು.
‘ಈ ಹಿಂದೆ ಕೂಡ ಕಂಪ್ಯೂಟರ್ ಆಪರೇಟರ್ ಕಡೆಯವರು ಸಹಾಯಕ ಎಂಜಿನಿಯರ್ ಒಬ್ಬರ ಮೇಲೆ ಹಲ್ಲೆ ನಡೆಸಿದ್ದರು. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಎರಡೂ ಪ್ರಕರಣಗಳನ್ನು ತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು’ ಎಂದು ಅವರು ಪೊಲೀಸರಿಗೆ ಮನವಿ ಮಾಡಿದರು.