ತಾಂಡಾದ 17 ವರ್ಷದ ಬಾಲಕಿಗೆ ಸೋಂಕು ತಗುಲಿದೆ. ಆಕೆಯನ್ನು ಕರೆತರಲು ಆರೋಗ್ಯ ಸಿಬ್ಬಂದಿ ಪೊಲೀಸರ ಸಹಾಯದೊಂದಿಗೆ ತಾಂಡಾಕ್ಕೆ ತೆರಳಿದಾಗ ಗ್ರಾಮಸ್ಥರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಇದೇ ವೇಳೆ ಗ್ರಾಮದ ವ್ಯಕ್ತಿಯ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಇದರಿಂದ ರೊಚ್ಚಿಗೆದ್ದ ನೂರಾರು ಜನ ಕಲ್ಲು, ದೊಣ್ಣೆಗಳಿಂದ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ.