<p><strong>ಕಲಬುರಗಿ:</strong> ‘ಮಳೆಗಾಲದಲ್ಲಿ ಕಲುಷಿತ ನೀರು ಕುಡಿದು ಏನಾದರು ಅವಘಡ ಸಂಭವಿಸಿದಲ್ಲಿ ಸಂಬಂಧಪಟ್ಟ ಮುಖ್ಯ ಅಧಿಕಾರಿಗಳನ್ನೇ ಜವಾಬ್ದಾರರನ್ನಾಗಿ ಮಾಡಿ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು’ ಎಂದು ಪೌರಾಡಳಿತ ಮತ್ತು ಹಜ್ ಖಾತೆ ಸಚಿವ ರಹೀಂ ಖಾನ್ ಎಚ್ಚರಿಕೆ ನೀಡಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.</p>.<p>‘ಮಳೆಗಾಲ ಸಮೀಪಿಸುತ್ತಿದ್ದು, ನಗರ ನಿವಾಸಿಗಳಿಗೆ ಕಲುಷಿತ ನೀರು ಪೂರೈಕೆ ಆಗದಂತೆ ಮುಖ್ಯಾಧಿಕಾರಿಗಳು ಎಚ್ಚರ ವಹಿಸಬೇಕು. ಕುಡಿಯುವ ನೀರಿನ ಕೊಳವೆ ಮಾರ್ಗಗಳ ನಿರ್ವಹಣೆ ಸಮರ್ಪಕವಾಗಿ ಇರುವಂತೆ ನೋಡಿಕೊಳ್ಳಬೇಕು’ ಎಂದು ಸೂಚಿಸಿದರು.</p>.<p>‘ನಗರ ಸ್ಥಳೀಯ ಸಂಸ್ಥೆಗಳಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರಿನ ಮೂಲಸೌಕರ್ಯ ಬಲಪಡಿಸಲು 2025-26ನೇ ಸಾಲಿನಲ್ಲಿ 15ನೇ ಹಣಕಾಸು, ಎಸ್ಎಫ್ಸಿ ಸೇರಿ ಇತರೆ ಯೋಜನೆಗಳಿಗೆ, ಕುಡಿಯುವ ನೀರು ಯೋಜನೆಗಳಿಗೆ ₹ 48.70 ಕೋಟಿ ಅನುದಾನ ನೀಡಲಾಗಿದೆ. ಜೂನ್ ಅಂತ್ಯದೊಳಗೆ ಕ್ರಿಯಾ ಯೋಜನೆ ಅನುಮೋದನೆ ಪಡೆದು ಕೆಲಸಗಳನ್ನು ಪ್ರಾರಂಭಿಸಬೇಕು’ ಎಂದರು.</p>.<p>‘ಕುಡಿಯುವ ನೀರಿನ ಕಾಮಗಾರಿಗಳನ್ನು ಆದ್ಯತೆ ಮೇಲೆ ಪ್ರಾರಂಭಿಸಬೇಕು. ಶುಕ್ರವಾರ ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ’ ಎಂದು ಹೇಳಿದರು.</p>.<p>‘ನಗರ ನಿವಾಸಿಗಳಿಗೆ ಮೂಲಸೌಕರ್ಯ ಒದಗಿಸಲು ಆಸ್ತಿ, ನೀರು, ಗ್ರಂಥಾಲಯ, ಜಾಹೀರಾತು, ವ್ಯಾಪಾರ ಪರವಾನಗಿ, ಮಳಿಗೆ ಕರವನ್ನು ಅಭಿಯಾನ ರೂಪದಲ್ಲಿ ವಸೂಲು ಮಾಡಬೇಕು. ಸಣ್ಣ ವರ್ತಕರಿಗಾಗಿ ಶಿಬಿರಗಳನ್ನು ಆಯೋಜಿಸಿ ವ್ಯಾಪಾರ ಪರವಾನಗಿ ನೀಡಬೇಕು’ ಎಂದು ನಿರ್ದೇಶನ ನೀಡಿದರು.</p>.<p>ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮುನಾವರ್ ದೌಲ್ ಮಾತನಾಡಿ, ‘2024-25ನೇ ಸಾಲಿನಲ್ಲಿ 13 ಸ್ಥಳೀಯ ಸಂಸ್ಥೆಗಳಿಂದ ₹ 85.76 ಕೋಟಿ ಆಸ್ತಿ ತೆರಿಗೆಯಲ್ಲಿ ₹ 52.22 ತೆರಿಗೆ ಸಂಗ್ರಹಿಸಲಾಗಿದೆ. ಕಳೆದ ವರ್ಷದ ನೀರಿನ ಕರದ ₹ 94.78 ಕೋಟಿ ಪೈಕಿ ₹ 15.34 ಕೋಟಿ ಸಂಗ್ರಹಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>‘ಮಳಿಗೆಗಳ ಪರವಾನಗಿಯ ₹ 10.48 ಕೋಟಿ ಗುರಿ ಪೈಕಿ ₹ 1.65 ಕೋಟಿ ಹಾಗೂ ವ್ಯಾಪಾರ ಪರವಾನಗಿಯ ₹ 3.30 ಕೋಟಿ ಪೈಕಿ ₹ 1.56 ಕೋಟಿ ವಸೂಲಿ ಮಾಡಲಾಗಿದೆ. ಅನಧಿಕೃತ ಕಟ್ಟಡಗಳಿಗೆ ‘ಬಿ’ ಖಾತಾ ನೀಡಲು ಕಳೆದ ಫೆಬ್ರವರಿ 18ರಿಂದ ಇದುವರೆಗೆ 10,386 ಅರ್ಜಿ ಸಲ್ಲಿಕೆಯಾಗಿವೆ. ಅವುಗಳಲ್ಲಿ 6,177 ಆಸ್ತಿಗಳಿಗೆ ‘ಬಿ’ ಖಾತಾ ನೀಡಲಾಗಿದೆ. ಇದರಿಂದ ಯುಎಲ್ಬಿಗಳಿಗೆ ₹2.63 ಕೋಟಿ ಕರ ಜಮೆಯಾಗಿದೆ’ ಎಂದರು.</p>.<p>ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಮೇಯರ್ ಯಲ್ಲಪ್ಪ ನಾಯಕೊಡಿ, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಪೌರಾಡಳಿತ ನಿರ್ದೇಶನಾಲಯದ ಎಂಜಿನಿಯರ್ ರಾಧಾಕೃಷ್ಣ, ಅಧೀಕ್ಷಕ ಎಂಜಿನಿಯರ್ ಬಸವರಾಜ, ಸಚಿವರ ಆಪ್ತ ಕಾರ್ಯದರ್ಶಿ ಕೆ.ಮುರಳಿಧರ ಸೇರಿದಂತೆ ಪೌರ ಸಂಸ್ಥೆಗಳ ಮುಖ್ಯಸ್ಥರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ‘ಮಳೆಗಾಲದಲ್ಲಿ ಕಲುಷಿತ ನೀರು ಕುಡಿದು ಏನಾದರು ಅವಘಡ ಸಂಭವಿಸಿದಲ್ಲಿ ಸಂಬಂಧಪಟ್ಟ ಮುಖ್ಯ ಅಧಿಕಾರಿಗಳನ್ನೇ ಜವಾಬ್ದಾರರನ್ನಾಗಿ ಮಾಡಿ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು’ ಎಂದು ಪೌರಾಡಳಿತ ಮತ್ತು ಹಜ್ ಖಾತೆ ಸಚಿವ ರಹೀಂ ಖಾನ್ ಎಚ್ಚರಿಕೆ ನೀಡಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.</p>.<p>‘ಮಳೆಗಾಲ ಸಮೀಪಿಸುತ್ತಿದ್ದು, ನಗರ ನಿವಾಸಿಗಳಿಗೆ ಕಲುಷಿತ ನೀರು ಪೂರೈಕೆ ಆಗದಂತೆ ಮುಖ್ಯಾಧಿಕಾರಿಗಳು ಎಚ್ಚರ ವಹಿಸಬೇಕು. ಕುಡಿಯುವ ನೀರಿನ ಕೊಳವೆ ಮಾರ್ಗಗಳ ನಿರ್ವಹಣೆ ಸಮರ್ಪಕವಾಗಿ ಇರುವಂತೆ ನೋಡಿಕೊಳ್ಳಬೇಕು’ ಎಂದು ಸೂಚಿಸಿದರು.</p>.<p>‘ನಗರ ಸ್ಥಳೀಯ ಸಂಸ್ಥೆಗಳಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರಿನ ಮೂಲಸೌಕರ್ಯ ಬಲಪಡಿಸಲು 2025-26ನೇ ಸಾಲಿನಲ್ಲಿ 15ನೇ ಹಣಕಾಸು, ಎಸ್ಎಫ್ಸಿ ಸೇರಿ ಇತರೆ ಯೋಜನೆಗಳಿಗೆ, ಕುಡಿಯುವ ನೀರು ಯೋಜನೆಗಳಿಗೆ ₹ 48.70 ಕೋಟಿ ಅನುದಾನ ನೀಡಲಾಗಿದೆ. ಜೂನ್ ಅಂತ್ಯದೊಳಗೆ ಕ್ರಿಯಾ ಯೋಜನೆ ಅನುಮೋದನೆ ಪಡೆದು ಕೆಲಸಗಳನ್ನು ಪ್ರಾರಂಭಿಸಬೇಕು’ ಎಂದರು.</p>.<p>‘ಕುಡಿಯುವ ನೀರಿನ ಕಾಮಗಾರಿಗಳನ್ನು ಆದ್ಯತೆ ಮೇಲೆ ಪ್ರಾರಂಭಿಸಬೇಕು. ಶುಕ್ರವಾರ ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ’ ಎಂದು ಹೇಳಿದರು.</p>.<p>‘ನಗರ ನಿವಾಸಿಗಳಿಗೆ ಮೂಲಸೌಕರ್ಯ ಒದಗಿಸಲು ಆಸ್ತಿ, ನೀರು, ಗ್ರಂಥಾಲಯ, ಜಾಹೀರಾತು, ವ್ಯಾಪಾರ ಪರವಾನಗಿ, ಮಳಿಗೆ ಕರವನ್ನು ಅಭಿಯಾನ ರೂಪದಲ್ಲಿ ವಸೂಲು ಮಾಡಬೇಕು. ಸಣ್ಣ ವರ್ತಕರಿಗಾಗಿ ಶಿಬಿರಗಳನ್ನು ಆಯೋಜಿಸಿ ವ್ಯಾಪಾರ ಪರವಾನಗಿ ನೀಡಬೇಕು’ ಎಂದು ನಿರ್ದೇಶನ ನೀಡಿದರು.</p>.<p>ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮುನಾವರ್ ದೌಲ್ ಮಾತನಾಡಿ, ‘2024-25ನೇ ಸಾಲಿನಲ್ಲಿ 13 ಸ್ಥಳೀಯ ಸಂಸ್ಥೆಗಳಿಂದ ₹ 85.76 ಕೋಟಿ ಆಸ್ತಿ ತೆರಿಗೆಯಲ್ಲಿ ₹ 52.22 ತೆರಿಗೆ ಸಂಗ್ರಹಿಸಲಾಗಿದೆ. ಕಳೆದ ವರ್ಷದ ನೀರಿನ ಕರದ ₹ 94.78 ಕೋಟಿ ಪೈಕಿ ₹ 15.34 ಕೋಟಿ ಸಂಗ್ರಹಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>‘ಮಳಿಗೆಗಳ ಪರವಾನಗಿಯ ₹ 10.48 ಕೋಟಿ ಗುರಿ ಪೈಕಿ ₹ 1.65 ಕೋಟಿ ಹಾಗೂ ವ್ಯಾಪಾರ ಪರವಾನಗಿಯ ₹ 3.30 ಕೋಟಿ ಪೈಕಿ ₹ 1.56 ಕೋಟಿ ವಸೂಲಿ ಮಾಡಲಾಗಿದೆ. ಅನಧಿಕೃತ ಕಟ್ಟಡಗಳಿಗೆ ‘ಬಿ’ ಖಾತಾ ನೀಡಲು ಕಳೆದ ಫೆಬ್ರವರಿ 18ರಿಂದ ಇದುವರೆಗೆ 10,386 ಅರ್ಜಿ ಸಲ್ಲಿಕೆಯಾಗಿವೆ. ಅವುಗಳಲ್ಲಿ 6,177 ಆಸ್ತಿಗಳಿಗೆ ‘ಬಿ’ ಖಾತಾ ನೀಡಲಾಗಿದೆ. ಇದರಿಂದ ಯುಎಲ್ಬಿಗಳಿಗೆ ₹2.63 ಕೋಟಿ ಕರ ಜಮೆಯಾಗಿದೆ’ ಎಂದರು.</p>.<p>ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಮೇಯರ್ ಯಲ್ಲಪ್ಪ ನಾಯಕೊಡಿ, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಪೌರಾಡಳಿತ ನಿರ್ದೇಶನಾಲಯದ ಎಂಜಿನಿಯರ್ ರಾಧಾಕೃಷ್ಣ, ಅಧೀಕ್ಷಕ ಎಂಜಿನಿಯರ್ ಬಸವರಾಜ, ಸಚಿವರ ಆಪ್ತ ಕಾರ್ಯದರ್ಶಿ ಕೆ.ಮುರಳಿಧರ ಸೇರಿದಂತೆ ಪೌರ ಸಂಸ್ಥೆಗಳ ಮುಖ್ಯಸ್ಥರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>