ತಾಲ್ಲೂಕು ಪರವಾನಗಿ ಹೊಂದಿರುವ ಹಾಗೂ ಒಂದೇ ಸಂಖ್ಯೆ ಎರಡು, ಮೂರು ಆಟೊಗಳು ನಗರದಲ್ಲಿ ಅನಧಿಕೃತವಾಗಿ ಸಂಚರಿಸುತ್ತಿವೆ. ಇದರಿಂದ ಅಧಿಕೃತ ಪರವಾನಗಿ ಹೊಂದಿರುವ ಆಟೊಗಳ ಮಾಲೀಕರು ಹಾಗೂ ಚಾಲಕರ ಉಪಜೀವನಕ್ಕೆ ಕಷ್ಟವಾಗುತ್ತಿದೆ. ಅಲ್ಲದೇ ಬ್ಯಾಂಕುಗಳು ಮತ್ತು ರಾಷ್ಟ್ರೀಕೃತ ಬ್ಯಾಂಕುಗಳಿಂದ ಸಾಲ ತಂದು ಆಟೊ ಖರೀದಿಸಿದವರು ಮಾಸಿಕ ಕಂತು ಪಾವತಿಗೆ ಪರದಾಡುತ್ತಿದ್ದಾರೆ. ಆದ್ದರಿಂದ ಇಂತಹ ಪರವಾನಗಿ ಇಲ್ಲದ ಆಟೊಗಳನ್ನು ಜಪ್ತಿ ಮಾಡಬೇಕು. ಈ ಬಗ್ಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಸಮಸ್ಯೆ ಬಗೆಹರಿದಿಲ್ಲ. ಈಗಲಾದರೂ ಸಮಸ್ಯೆ ಬಗೆಗರಿಸಲು ಮುಂದಾಗಬೇಕು. ಇಲ್ಲದಿದ್ದರೆ ಧರಣಿ ಸತ್ಯಾಗ್ರಹ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.