<p><strong>ಕಲಬುರ್ಗಿ:</strong> ನಗರದ ವಿಮಾನ ನಿಲ್ದಾಣದಿಂದ ವಾರದಲ್ಲಿ ಮೂರು ದಿನ ದೆಹಲಿ (ಹಿಂಡನ್)ಗೆ ವಿಮಾನ ಸಂಚಾರವನ್ನು ಸ್ಟಾರ್ ಏರ್ ವಿಮಾನಯಾನ ಸಂಸ್ಥೆ ಆರಂಭಿಸಿದೆ.</p>.<p>ಪ್ರತಿ ಮಂಗಳವಾರ, ಬುಧವಾರ ಹಾಗೂ ಶನಿವಾರ ಸಂಚಾರ ಕೈಗೊಳ್ಳಲಿದ್ದು, ಸಂಸದ ಡಾ.ಉಮೇಶ ಜಾಧವ ಬುಧವಾರ ಬೆಳಿಗ್ಗೆ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸಂಚಾರಕ್ಕೆ ಚಾಲನೆ ನೀಡಿದರು.</p>.<p>ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಾಧವ, ಉದ್ಘಾಟನೆಯಾದ ಒಂದು ವರ್ಷದಲ್ಲೇ ಕಲಬುರ್ಗಿ ವಿಮಾನ ನಿಲ್ದಾಣವು ದೇಶದಲ್ಲೇ ಅತ್ಯಂತ ಹೆಚ್ಚು ಸಕ್ರಿಯ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಪ್ರಸ್ತುತ ಇಲ್ಲಿಂದ ಬೆಂಗಳೂರು, ದೆಹಲಿಗೆ ವಿಮಾನ ಸಂಚಾರ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಹುಬ್ಬಳ್ಳಿ-ಕಲಬುರ್ಗಿ- ಹೈದರಾಬಾದ್, ಮುಂಬೈ, ತಿರುಪತಿಗೆ ಸಂಚಾರ ಆರಂಭಿಸಲಾಗುವುದು' ಎಂದರು.</p>.<p>ಶಾಸಕ ಬಸವರಾಜ ಮತ್ತಿಮೂಡ, ವಿಧಾನಪರಿಷತ್ ಸದಸ್ಯ ಬಿ.ಜಿ.ಪಾಟೀಲ, ವಿಮಾನ ನಿಲ್ದಾಣ ನಿರ್ದೇಶಕ ಎಸ್. ಜ್ಞಾನೇಶ್ವರರಾವ್,<br />ಬಿಜೆಪಿ ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಮಹಾನಗರ ಅಧ್ಯಕ್ಷ ಸಿದ್ದಾಜಿ ಪಾಟೀಲ ಇದ್ದರು.</p>.<p>ವಾರದಲ್ಲಿ ಮೂರು ದಿನ ಬೆಳಿಗ್ಗೆ 10.20ಕ್ಕೆ ಇಲ್ಲಿಂದ ಹೊರಟು ಮಧ್ಯಾಹ್ನ 12.40ಕ್ಕೆ ಹಿಂಡನ್ ತಲುಪಲಿದೆ. ಮಧ್ಯಾಹ್ನ 1.10ಕ್ಕೆ ಹಿಂಡನ್ ನಿಂದ ಹೊರಟು ಮಧ್ಯಾಹ್ನ 3.30ಕ್ಕೆ ಕಲಬುರ್ಗಿ ತಲುಪಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ನಗರದ ವಿಮಾನ ನಿಲ್ದಾಣದಿಂದ ವಾರದಲ್ಲಿ ಮೂರು ದಿನ ದೆಹಲಿ (ಹಿಂಡನ್)ಗೆ ವಿಮಾನ ಸಂಚಾರವನ್ನು ಸ್ಟಾರ್ ಏರ್ ವಿಮಾನಯಾನ ಸಂಸ್ಥೆ ಆರಂಭಿಸಿದೆ.</p>.<p>ಪ್ರತಿ ಮಂಗಳವಾರ, ಬುಧವಾರ ಹಾಗೂ ಶನಿವಾರ ಸಂಚಾರ ಕೈಗೊಳ್ಳಲಿದ್ದು, ಸಂಸದ ಡಾ.ಉಮೇಶ ಜಾಧವ ಬುಧವಾರ ಬೆಳಿಗ್ಗೆ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸಂಚಾರಕ್ಕೆ ಚಾಲನೆ ನೀಡಿದರು.</p>.<p>ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಾಧವ, ಉದ್ಘಾಟನೆಯಾದ ಒಂದು ವರ್ಷದಲ್ಲೇ ಕಲಬುರ್ಗಿ ವಿಮಾನ ನಿಲ್ದಾಣವು ದೇಶದಲ್ಲೇ ಅತ್ಯಂತ ಹೆಚ್ಚು ಸಕ್ರಿಯ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಪ್ರಸ್ತುತ ಇಲ್ಲಿಂದ ಬೆಂಗಳೂರು, ದೆಹಲಿಗೆ ವಿಮಾನ ಸಂಚಾರ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಹುಬ್ಬಳ್ಳಿ-ಕಲಬುರ್ಗಿ- ಹೈದರಾಬಾದ್, ಮುಂಬೈ, ತಿರುಪತಿಗೆ ಸಂಚಾರ ಆರಂಭಿಸಲಾಗುವುದು' ಎಂದರು.</p>.<p>ಶಾಸಕ ಬಸವರಾಜ ಮತ್ತಿಮೂಡ, ವಿಧಾನಪರಿಷತ್ ಸದಸ್ಯ ಬಿ.ಜಿ.ಪಾಟೀಲ, ವಿಮಾನ ನಿಲ್ದಾಣ ನಿರ್ದೇಶಕ ಎಸ್. ಜ್ಞಾನೇಶ್ವರರಾವ್,<br />ಬಿಜೆಪಿ ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಮಹಾನಗರ ಅಧ್ಯಕ್ಷ ಸಿದ್ದಾಜಿ ಪಾಟೀಲ ಇದ್ದರು.</p>.<p>ವಾರದಲ್ಲಿ ಮೂರು ದಿನ ಬೆಳಿಗ್ಗೆ 10.20ಕ್ಕೆ ಇಲ್ಲಿಂದ ಹೊರಟು ಮಧ್ಯಾಹ್ನ 12.40ಕ್ಕೆ ಹಿಂಡನ್ ತಲುಪಲಿದೆ. ಮಧ್ಯಾಹ್ನ 1.10ಕ್ಕೆ ಹಿಂಡನ್ ನಿಂದ ಹೊರಟು ಮಧ್ಯಾಹ್ನ 3.30ಕ್ಕೆ ಕಲಬುರ್ಗಿ ತಲುಪಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>