<p><strong>ಕಲಬುರಗಿ</strong>: ಉದ್ಯಮಿ ಎಸ್.ಎಸ್.ಪಾಟೀಲರ ದ್ವಿತೀಯ ಪುಣ್ಯಸ್ಮರಣೆ ಅಂಗವಾಗಿ ಐವರು ಸಾಧಕರಿಗೆ ಕರ್ಮಯೋಗಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಎಸ್.ಆರ್.ಪಾಟೀಲ ಫೌಂಡೇಷನ್ ಅಧ್ಯಕ್ಷ ಮನು ಬಳಿಗಾರ್ ತಿಳಿಸಿದರು.</p>.<p>ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ‘ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಸಂಜೆ 6 ಗಂಟೆಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಎಸ್.ಆರ್.ಪಾಟೀಲ ಫೌಂಡೇಷನ್ ಹಾಗೂ ಪಾಟೀಲ ಗ್ರೂಪ್ ಆಫ್ ಇಂಡಸ್ಟ್ರೀಸ್ ವತಿಯಿಂದ ಈ ಸಮಾರಂಭ ಆಯೋಜಿಸಲಾಗಿದೆ’ ಎಂದು ವಿವರಿಸಿದರು.</p>.<p>‘ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ದಾಕ್ಷಾಯಿಣಿ ಎಸ್.ಅಪ್ಪಾ ಸಾನ್ನಿಧ್ಯ ವಹಿಸುವರು. ಸಂಸದ ರಾಧಾಕೃಷ್ಣ ದೊಡ್ಡಮನಿ ಕಾರ್ಯಕ್ರಮ ಉದ್ಘಾಟಿಸುವರು. ಕೆಕೆಆರ್ಡಿಬಿ ಅಧ್ಯಕ್ಷ ಡಾ.ಅಜಯಸಿಂಗ್, ಶಾಸಕ ಅಲ್ಲಮಪ್ರಭು ಪಾಟೀಲ, ಜಿಲ್ಲಾಧಿಕಾರಿ ಬಿ.ಫೌಜಿಯಾ ತರುನ್ನುಮ್ ಅತಿಥಿಗಳಾಗಿ ಪಾಲ್ಗೊಳ್ಳುವರು’ ಎಂದರು.</p>.<p>‘ಫೌಂಡೇಷನ್ ಗೌರವಾಧ್ಯಕ್ಷೆ ಸರೋಜಿನಿದೇವಿ ಎಸ್.ಪಾಟೀಲ ಉಪಸ್ಥಿತರಿರುವರು. ಕಸಾಪ ಮಾಜಿ ಅಧ್ಯಕ್ಷ ಮನು ಬಳಿಗಾರ್ ಅಧ್ಯಕ್ಷತೆ ವಹಿಸುವರು. ಉದ್ಯಮಿ ರೇವಣಸಿದ್ದಪ್ಪ ಜಿ.ಪಾಟೀಲ್, ಪಾಟೀಲ ಗ್ರೂಪ್ ಆಫ್ ಇಂಡಸ್ಟ್ರೀಸ್ ಅಧ್ಯಕ್ಷ ಲಿಂಗರಾಜ ಎಸ್.ಪಾಟೀಲ, ನಿರ್ದೇಶಕ ಸಿದ್ದಲಿಂಗ ಎಸ್.ಪಾಟೀಲ ಪಾಲ್ಗೊಳ್ಳಲಿದ್ದಾರೆ’ ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ಪಾಟೀಲ್ ಗ್ರೂಪ್ ಆಫ್ ಇಂಡಸ್ಟ್ರೀಸ್ ನಿರ್ದೇಶಕ ಸಿದ್ಧಲಿಂಗ ಪಾಟೀಲ, ಸಂದೀಪ ಬಿ., ನಾಗೇಶ, ನಾಗರಾಜ, ರಾಜು ಕಣ್ಣಿ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ಉದ್ಯಮಿ ಎಸ್.ಎಸ್.ಪಾಟೀಲರ ದ್ವಿತೀಯ ಪುಣ್ಯಸ್ಮರಣೆ ಅಂಗವಾಗಿ ಐವರು ಸಾಧಕರಿಗೆ ಕರ್ಮಯೋಗಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಎಸ್.ಆರ್.ಪಾಟೀಲ ಫೌಂಡೇಷನ್ ಅಧ್ಯಕ್ಷ ಮನು ಬಳಿಗಾರ್ ತಿಳಿಸಿದರು.</p>.<p>ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ‘ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಸಂಜೆ 6 ಗಂಟೆಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಎಸ್.ಆರ್.ಪಾಟೀಲ ಫೌಂಡೇಷನ್ ಹಾಗೂ ಪಾಟೀಲ ಗ್ರೂಪ್ ಆಫ್ ಇಂಡಸ್ಟ್ರೀಸ್ ವತಿಯಿಂದ ಈ ಸಮಾರಂಭ ಆಯೋಜಿಸಲಾಗಿದೆ’ ಎಂದು ವಿವರಿಸಿದರು.</p>.<p>‘ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ದಾಕ್ಷಾಯಿಣಿ ಎಸ್.ಅಪ್ಪಾ ಸಾನ್ನಿಧ್ಯ ವಹಿಸುವರು. ಸಂಸದ ರಾಧಾಕೃಷ್ಣ ದೊಡ್ಡಮನಿ ಕಾರ್ಯಕ್ರಮ ಉದ್ಘಾಟಿಸುವರು. ಕೆಕೆಆರ್ಡಿಬಿ ಅಧ್ಯಕ್ಷ ಡಾ.ಅಜಯಸಿಂಗ್, ಶಾಸಕ ಅಲ್ಲಮಪ್ರಭು ಪಾಟೀಲ, ಜಿಲ್ಲಾಧಿಕಾರಿ ಬಿ.ಫೌಜಿಯಾ ತರುನ್ನುಮ್ ಅತಿಥಿಗಳಾಗಿ ಪಾಲ್ಗೊಳ್ಳುವರು’ ಎಂದರು.</p>.<p>‘ಫೌಂಡೇಷನ್ ಗೌರವಾಧ್ಯಕ್ಷೆ ಸರೋಜಿನಿದೇವಿ ಎಸ್.ಪಾಟೀಲ ಉಪಸ್ಥಿತರಿರುವರು. ಕಸಾಪ ಮಾಜಿ ಅಧ್ಯಕ್ಷ ಮನು ಬಳಿಗಾರ್ ಅಧ್ಯಕ್ಷತೆ ವಹಿಸುವರು. ಉದ್ಯಮಿ ರೇವಣಸಿದ್ದಪ್ಪ ಜಿ.ಪಾಟೀಲ್, ಪಾಟೀಲ ಗ್ರೂಪ್ ಆಫ್ ಇಂಡಸ್ಟ್ರೀಸ್ ಅಧ್ಯಕ್ಷ ಲಿಂಗರಾಜ ಎಸ್.ಪಾಟೀಲ, ನಿರ್ದೇಶಕ ಸಿದ್ದಲಿಂಗ ಎಸ್.ಪಾಟೀಲ ಪಾಲ್ಗೊಳ್ಳಲಿದ್ದಾರೆ’ ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ಪಾಟೀಲ್ ಗ್ರೂಪ್ ಆಫ್ ಇಂಡಸ್ಟ್ರೀಸ್ ನಿರ್ದೇಶಕ ಸಿದ್ಧಲಿಂಗ ಪಾಟೀಲ, ಸಂದೀಪ ಬಿ., ನಾಗೇಶ, ನಾಗರಾಜ, ರಾಜು ಕಣ್ಣಿ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>