<p><strong>ಚಿಂಚೋಳಿ</strong>: ರಂಗ ನೃಪತುಂಗ ಪ್ರಶಸ್ತಿಗೆ ಒಟ್ಟು 25 ಮಂದಿ ಕಲಾವಿದರನ್ನು ಆಯ್ಕೆ ಮಾಡಲಾಗಿದ್ದು, ಅದರಲ್ಲಿ ಚಿಂಚೋಳಿ ತಾಲ್ಲೂಕಿನ ನಾಲ್ವರು ಕಲಾವಿದರು ಆಯ್ಕೆಯಾಗಿದ್ದಾರೆ ಎಂದು ಸೇಡಂನ ನೃಪತುಂಗ ಹವ್ಯಾಸಿ ಕಲಾವಿದರ ನಾಟ್ಯ ಸಂಘದ ಅಧ್ಯಕ್ಷ ಸಂಗಣ್ಣ ಅಲ್ದಿ ತಿಳಿಸಿದರು.</p>.<p>ಪಟ್ಟಣದಲ್ಲಿ ಮಂಗಳವಾರ ನಡೆದ ಸರಳ ಕಾರ್ಯಕ್ರಮದಲ್ಲಿ ಪ್ರಶಸ್ತಿಗೆ ಆಯ್ಕೆಯಾದ ಕುರಿತು ಪತ್ರ ನೀಡಿ ಕಲಾವಿದರಿಗೆ ಸನ್ಮಾನಿಸಿ ಕಾರ್ಯಕ್ರಮಕ್ಕೆ ಆಹ್ವಾನ ಪತ್ರ ನೀಡಿದರು.</p>.<p>‘ಹಿರಿಯ ರಂಗಕರ್ಮಿ ಶಾಮರಾವ ಕೊರವಿ, ನಾಟಕಕಾರ ಶಂಕರ ಹೂವಿನ ಹಿಪ್ಪರಗಿ, ಕಲಾವಿದರಾದ ಗೋಪಾಲ ಬಾಜೇಪಳ್ಳಿ ಮತ್ತು ಚಿಮ್ಮಾಯಿದಲಾಯಿ ಗ್ರಾಮದ ಧರ್ಮಣ್ಣ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರದಾನ ಹಾಗೂ ಸಂಘದ ದ್ವಿತೀಯ ವಾರ್ಷಿಕೋತ್ಸವ ಅ. 22ರಂದು ಹಮ್ಮಿಕೊಳ್ಳಲಾಗಿದೆ’ ಎಂದು ಹೇಳಿದರು.</p>.<p>ಸಂಘದ ಉಪಾಧ್ಯಕ್ಷ ರಾಜಶೇಖರ ಮಂಗಲಗಿ, ಸ್ಥಳೀಯ ಕಲಾವಿದರಾದ ಪ್ರಶಾಂತ ಕಟ್ಟಿ, ರವಿಗೌಡ, ರಾಮಯ್ಯಸ್ವಾಮಿ, ಶಿಕ್ಷಕ ಮಲ್ಲಪ್ಪ ಕರಕಟಿ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂಚೋಳಿ</strong>: ರಂಗ ನೃಪತುಂಗ ಪ್ರಶಸ್ತಿಗೆ ಒಟ್ಟು 25 ಮಂದಿ ಕಲಾವಿದರನ್ನು ಆಯ್ಕೆ ಮಾಡಲಾಗಿದ್ದು, ಅದರಲ್ಲಿ ಚಿಂಚೋಳಿ ತಾಲ್ಲೂಕಿನ ನಾಲ್ವರು ಕಲಾವಿದರು ಆಯ್ಕೆಯಾಗಿದ್ದಾರೆ ಎಂದು ಸೇಡಂನ ನೃಪತುಂಗ ಹವ್ಯಾಸಿ ಕಲಾವಿದರ ನಾಟ್ಯ ಸಂಘದ ಅಧ್ಯಕ್ಷ ಸಂಗಣ್ಣ ಅಲ್ದಿ ತಿಳಿಸಿದರು.</p>.<p>ಪಟ್ಟಣದಲ್ಲಿ ಮಂಗಳವಾರ ನಡೆದ ಸರಳ ಕಾರ್ಯಕ್ರಮದಲ್ಲಿ ಪ್ರಶಸ್ತಿಗೆ ಆಯ್ಕೆಯಾದ ಕುರಿತು ಪತ್ರ ನೀಡಿ ಕಲಾವಿದರಿಗೆ ಸನ್ಮಾನಿಸಿ ಕಾರ್ಯಕ್ರಮಕ್ಕೆ ಆಹ್ವಾನ ಪತ್ರ ನೀಡಿದರು.</p>.<p>‘ಹಿರಿಯ ರಂಗಕರ್ಮಿ ಶಾಮರಾವ ಕೊರವಿ, ನಾಟಕಕಾರ ಶಂಕರ ಹೂವಿನ ಹಿಪ್ಪರಗಿ, ಕಲಾವಿದರಾದ ಗೋಪಾಲ ಬಾಜೇಪಳ್ಳಿ ಮತ್ತು ಚಿಮ್ಮಾಯಿದಲಾಯಿ ಗ್ರಾಮದ ಧರ್ಮಣ್ಣ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರದಾನ ಹಾಗೂ ಸಂಘದ ದ್ವಿತೀಯ ವಾರ್ಷಿಕೋತ್ಸವ ಅ. 22ರಂದು ಹಮ್ಮಿಕೊಳ್ಳಲಾಗಿದೆ’ ಎಂದು ಹೇಳಿದರು.</p>.<p>ಸಂಘದ ಉಪಾಧ್ಯಕ್ಷ ರಾಜಶೇಖರ ಮಂಗಲಗಿ, ಸ್ಥಳೀಯ ಕಲಾವಿದರಾದ ಪ್ರಶಾಂತ ಕಟ್ಟಿ, ರವಿಗೌಡ, ರಾಮಯ್ಯಸ್ವಾಮಿ, ಶಿಕ್ಷಕ ಮಲ್ಲಪ್ಪ ಕರಕಟಿ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>