ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥಾನಮಠದ ಪೀಠಾಧಿಪತಿ ಡಾ.ರೇವಣಸಿದ್ಧ ಶಿವಾಚಾರ್ಯರು,’ಮಂಜುನಾಥ್ ಅವರು ಈಗಾಗಲೇ ಸುಮಾರು 80 ಸಾವಿರಕ್ಕೂ ಅಧಿಕ ಹೃದಯ ಶಸ್ತ್ರಚಿಕಿತ್ಸೆಗಳನ್ನು ನೆರವೇರಿಸಿ ಸಾಧನೆ ಮಾಡಿದ್ದಾರೆ. ಬೆಂಗಳೂರಿನಂತಹ ದುಬಾರಿ ನಗರದಲ್ಲಿ ಬಡವರ ಕೈಗೆಟಕುವ ದರದಲ್ಲಿ ಆರೋಗ್ಯ ಸೇವೆಯನ್ನು ಜಯದೇವ ಸಂಸ್ಥೆಯ ಮೂಲಕ ಸಲ್ಲಿಸುತ್ತಿದ್ದಾರೆ. ಕಲಬುರ್ಗಿಯಲ್ಲಿಯೂ ಜಯದೇವ ಹೃದ್ರೋಗ ಸಂಸ್ಥೆಯನ್ನು ಆರಂಭಿಸುವ ಮೂಲಕ ಈ ಭಾಗದ ಜನಗಳು ಚಿಕಿತ್ಸೆಗಾಗಿ ಸೊಲ್ಲಾಪುರ, ಪುಣೆ, ಹೈದರಾಬಾದ್ಗೆ ಹೋಗುವುದನ್ನು ತಪ್ಪಿಸಿದ್ದಾರೆ. ಹೀಗಾಗಿ, ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ’ ಎಂದರು.