ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾ.ಜಯದೇವಿ ಕೃತಿಗೆ ಪುಸ್ತಕ ಬಹುಮಾನ

Last Updated 26 ಸೆಪ್ಟೆಂಬರ್ 2022, 12:01 IST
ಅಕ್ಷರ ಗಾತ್ರ

ಕಲಬುರಗಿ: ಇಲ್ಲಿನ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಸಂಗೀತ ಮತ್ತು ಲಲಿತಕಲಾ ವಿಭಾಗದ ಸಹಾಯಕ ಪ್ರಾಧ್ಯಾಪಕಿ, ವಿದುಷಿ ಡಾ. ಜಯದೇವಿ ಜಂಗಮಶೆಟ್ಟಿ ಅವರು ಬರೆದ ‘ಉಲಿವ ನಾದದ ಚರಣ’ ಪುಸ್ತಕವು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಪುಸ್ತಕ ಬಹುಮಾನಕ್ಕೆ ಆಯ್ಕೆಯಾಗಿದೆ.

ಬಹುಮಾನವು ₹ 25 ಸಾವಿರ ಗೌರವ ಧನ, ನೆನಪಿನ ಕಾಣಿಕೆ, ಪ್ರಮಾಣಪತ್ರವನ್ನು ಒಳಗೊಂಡಿದೆ. ಅಕ್ಟೋಬರ್ 11ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅಕಾಡೆಮಿ ಅಧ್ಯಕ್ಷ ಆನೂರು ಅನಂತಕೃಷ್ಣ ಶರ್ಮ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT