ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲೆಗಳ ಆರಂಭ ಕುರಿತಂತೆ ಸರ್ಕಾರ ಸ್ಪಷ್ಟ ಆದೇಶ ನೀಡುತ್ತಿಲ್ಲ.ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮತ್ತು ಪ್ರಾಥಮಿಕ ಶಿಕ್ಷಣ ಸಚಿವ ಎಸ್. ಸುರೇಶಕುಮಾರ್ ಎಲ್ಲರೂ ವಿಭಿನ್ನ ಹೇಳಿಕೆ ನೀಡುತ್ತಿದ್ದಾರೆ. ಈ ಸರ್ಕಾರದಲ್ಲಿ ಸಮನ್ವಯತೆಯೇ ಇಲ್ಲ’ ಎಂದು ಟೀಕಿಸಿದರು.