ಧರಣಿಗೆ ಬೆಂಬಲಿಸಿ ಗ್ರಾಮದ ಮಹಿಳೆಯರು ಮಾತನಾಡಿ, ‘ಬಡದಾಳ ನಾಗರಿಕ ಹೋರಾಟ ಸಮಿತಿಯ ವತಿಯಿಂದ ಗ್ರಾಮದ ಸಂಪರ್ಕ ರಸ್ತೆಗಳ ಸುಧಾರಣೆಗಾಗಿ ನಡೆಯುತ್ತಿರುವ ಅನಿರ್ಧಿಷ್ಟ ಧರಣಿ ಸತ್ಯಾಗ್ರಹ 18ನೇ ದಿನಕ್ಕೆ ಕಾಲಿಟ್ಟಿದೆ. ಮಾ.13ರಂದು ಕಲಬುರಗಿಯಲ್ಲಿ ನಡೆಯುತ್ತಿರುವ ಗ್ಯಾರಂಟಿ ಸಮಾವೇಶಕ್ಕೆ ಗ್ರಾಮದ ವಿವಿಧ ಮಹಿಳಾ ಸಂಘಟನೆಯವರನ್ನು ಕಾರ್ಯಕ್ರಮಕ್ಕೆ ಬರುವಂತೆ ಸಾರಿಗೆ ಬಸ್ಸೊಂದನ್ನು ಬಡದಾಳ ಗ್ರಾಮಕ್ಕೆ ಕಳುಹಿಸಲಾಗಿತ್ತು. ಆದರೆ ಮಹಿಳೆಯರು ಸ್ವಯಂಪ್ರೇರಿತರಾಗಿ ಗ್ಯಾರಂಟಿ ಸಮಾವೇಶ ಧಿಕ್ಕರಿಸಿ ಧರಣಿ ಸ್ಥಳಕ್ಕೆ ಬಂದು ಬುಧವಾರ ಬೆಂಬಲ ಸೂಚಿಸಿದರು.