<p><strong>ಕಲಬುರಗಿ</strong>: ‘ವಿಜಯಪುರದ ಸಂಸದ, ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರು ಬಂಜಾರ ಸಮಾಜದ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಕೂಡಲೇ ತಮ್ಮ ಹೇಳಿಕೆ ಬಗ್ಗೆ ಕ್ಷಮೆಯಾಚಿಸಬೇಕು’ ಎಂದು ಗೋರ ಸೇನಾ ರಾಜ್ಯ ಸಮಿತಿ ಜಿಲ್ಲಾ ಅಧ್ಯಕ್ಷ ಮಾನಸಿಂಗ್ ಆರ್. ಚವ್ಹಾಣ್ ಒತ್ತಾಯಿಸಿದರು.</p>.<p>‘ಬಂಜಾರ ಸಮಾಜದ ಮುಖಂಡ ಬಾಬು ರಾಜೇಂದ್ರ ನಾಯಕ ಅವರಿಗೆ ಬಿಜೆಪಿ ಟಿಕೆಟ್ ನೀಡುವಂತೆ ಆಗ್ರಹಿಸಿ ಪಕ್ಷದ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದರು. ಈ ಕುರಿತು ಮಾಧ್ಯಮದವರಿಗೆ ಪ್ರತಿಕ್ರಿಯಿಸುವಾಗ ಜಿಗಜಿಣಗಿ ಅವರು ಸಮಾಜದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.</p>.<p>ಸಂಘಟನಾ ಕಾರ್ಯದರ್ಶಿ ಶ್ರೀಧರ ಚವ್ಹಾಣ್ ಮಾತನಾಡಿ, ‘ಜಿಗಜಿಣಗಿ ಅವರು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು. ಬಂಜಾರ ಸಮಾಜದ ಜನರಲ್ಲಿ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಮುಂಬರುವ ಚುನಾವಣೆಯಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಸಂಘನೆಯ ಪದಾಧಿಕಾರಿಗಳಾದ ಯಮರಾಜ, ಪ್ರಭಾಕರ ರಾಠೋಡ, ಗುಂಡು ಚವ್ಹಾಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ‘ವಿಜಯಪುರದ ಸಂಸದ, ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರು ಬಂಜಾರ ಸಮಾಜದ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಕೂಡಲೇ ತಮ್ಮ ಹೇಳಿಕೆ ಬಗ್ಗೆ ಕ್ಷಮೆಯಾಚಿಸಬೇಕು’ ಎಂದು ಗೋರ ಸೇನಾ ರಾಜ್ಯ ಸಮಿತಿ ಜಿಲ್ಲಾ ಅಧ್ಯಕ್ಷ ಮಾನಸಿಂಗ್ ಆರ್. ಚವ್ಹಾಣ್ ಒತ್ತಾಯಿಸಿದರು.</p>.<p>‘ಬಂಜಾರ ಸಮಾಜದ ಮುಖಂಡ ಬಾಬು ರಾಜೇಂದ್ರ ನಾಯಕ ಅವರಿಗೆ ಬಿಜೆಪಿ ಟಿಕೆಟ್ ನೀಡುವಂತೆ ಆಗ್ರಹಿಸಿ ಪಕ್ಷದ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದರು. ಈ ಕುರಿತು ಮಾಧ್ಯಮದವರಿಗೆ ಪ್ರತಿಕ್ರಿಯಿಸುವಾಗ ಜಿಗಜಿಣಗಿ ಅವರು ಸಮಾಜದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.</p>.<p>ಸಂಘಟನಾ ಕಾರ್ಯದರ್ಶಿ ಶ್ರೀಧರ ಚವ್ಹಾಣ್ ಮಾತನಾಡಿ, ‘ಜಿಗಜಿಣಗಿ ಅವರು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು. ಬಂಜಾರ ಸಮಾಜದ ಜನರಲ್ಲಿ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಮುಂಬರುವ ಚುನಾವಣೆಯಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಸಂಘನೆಯ ಪದಾಧಿಕಾರಿಗಳಾದ ಯಮರಾಜ, ಪ್ರಭಾಕರ ರಾಠೋಡ, ಗುಂಡು ಚವ್ಹಾಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>