<p><strong>ಕಲಬುರಗಿ:</strong> ‘ಮುಸ್ಲಿಂ ಯುವತಿಯರನ್ನು ಮದುವೆಯಾಗುವ ಹಿಂದೂ ಯುವಕರಿಗೆ ₹5 ಲಕ್ಷ ನೀಡುವೆ’ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ’ ಎಂಬ ಆರೋಪದಡಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಇಲ್ಲಿನ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಶಾಸಕ ಯತ್ನಾಳ ಹೇಳಿಕೆ ಒಂದು ಸಮುದಾಯವನ್ನು ಪ್ರಚೋದಿಸುವಂತಿದೆ. ಕಾನೂನು ಸುವ್ಯವಸ್ಥೆ ಸಮಸ್ಯೆ ಸೃಷ್ಟಿಸುವಂತಿದೆ" ಎಂದು ಆರೋಪಿಸಿ ಕಲಬುರಗಿಯ ಖಮರ್ ಕಾಲೊನಿಯ ಖದ್ಮತ್–ಎ–ಮಿಲ್ಲತ್ ಕಮಿಟಿಯ ಅಧ್ಯಕ್ಷ ಖಮರ್ ಜುನೈದ್ ಖುರೇಶಿ ಅವರು ದೂರು ನೀಡಿದ್ದರು’ ಎಂದು ಇಲ್ಲಿನ ರೋಜಾ ಠಾಣೆಯ ಪೊಲೀಸರು ತಿಳಿಸಿದ್ದಾರೆ.</p>.<p>ಕೊಪ್ಪಳದಲ್ಲಿ ಮುಸ್ಲಿಂ ಯುವಕನಿಂದ ಕೊಲೆಯಾದ ಗವಿಸಿದ್ಧಪ್ಪ ನಾಯಕ ಅವರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ ಬಳಿಕ ಯತ್ನಾಳ ಅವರು ಸುದ್ದಿಗಾರರೊಂದಿಗೆ ಮಾತನಾಡಿದಾಗ ಈ ಹೇಳಿಕೆ ನೀಡಿದ್ದರು.</p>.<p>ವಿಜಯಪುರ ವರದಿ: ‘ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಇತ್ತೀಚೆಗೆ ಕೊಪ್ಪಳದಲ್ಲಿ ನೀಡಿದ ಹೇಳಿಕೆ ಕುರಿತು ಇಲ್ಲಿ ಮೊಕದ್ದಮೆ ದಾಖಲಾಗಿದೆ.</p>.<p>ವಿಜಯಪುರ ಮಹಾನಗರ ಪಾಲಿಕೆ ಮಾಜಿ ಸದಸ್ಯ ಮೈನುದ್ದೀನ್ ಬೀಳಗಿ ಅವರು ನಗರದ ಗಾಂಧಿಚೌಕಿ ಪೊಲೀಸ್ ಠಾಣೆಯಲ್ಲಿ ಬುಧವಾರ ಯತ್ನಾಳ ವಿರುದ್ಧ ದೂರು ದಾಖಲಿಸಿದ್ದಾರೆ.</p>.<p>ಶಾಸಕರ ಹೇಳಿಕೆ ಸಮಾಜದಲ್ಲಿ ಶಾಂತಿ, ಸೌಹಾರ್ದ ಕದಡುವಂತಿದೆ. ಕೋಮು ದ್ವೇಷಕ್ಕೆ ಕಾರಣವಾಗಿದೆ. ಅವರ ವಿರುದ್ಧ ಕಲಂ 299, 193, 353(1)(ಸಿ),353(2) ಬಿ.ಎನ್.ಎಸ್.2023 ಅಡಿಯಲ್ಲಿ ಕ್ರಮಕೈಗೊಳ್ಳುವಂತೆ ದೂರು ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ‘ಮುಸ್ಲಿಂ ಯುವತಿಯರನ್ನು ಮದುವೆಯಾಗುವ ಹಿಂದೂ ಯುವಕರಿಗೆ ₹5 ಲಕ್ಷ ನೀಡುವೆ’ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ’ ಎಂಬ ಆರೋಪದಡಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಇಲ್ಲಿನ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಶಾಸಕ ಯತ್ನಾಳ ಹೇಳಿಕೆ ಒಂದು ಸಮುದಾಯವನ್ನು ಪ್ರಚೋದಿಸುವಂತಿದೆ. ಕಾನೂನು ಸುವ್ಯವಸ್ಥೆ ಸಮಸ್ಯೆ ಸೃಷ್ಟಿಸುವಂತಿದೆ" ಎಂದು ಆರೋಪಿಸಿ ಕಲಬುರಗಿಯ ಖಮರ್ ಕಾಲೊನಿಯ ಖದ್ಮತ್–ಎ–ಮಿಲ್ಲತ್ ಕಮಿಟಿಯ ಅಧ್ಯಕ್ಷ ಖಮರ್ ಜುನೈದ್ ಖುರೇಶಿ ಅವರು ದೂರು ನೀಡಿದ್ದರು’ ಎಂದು ಇಲ್ಲಿನ ರೋಜಾ ಠಾಣೆಯ ಪೊಲೀಸರು ತಿಳಿಸಿದ್ದಾರೆ.</p>.<p>ಕೊಪ್ಪಳದಲ್ಲಿ ಮುಸ್ಲಿಂ ಯುವಕನಿಂದ ಕೊಲೆಯಾದ ಗವಿಸಿದ್ಧಪ್ಪ ನಾಯಕ ಅವರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ ಬಳಿಕ ಯತ್ನಾಳ ಅವರು ಸುದ್ದಿಗಾರರೊಂದಿಗೆ ಮಾತನಾಡಿದಾಗ ಈ ಹೇಳಿಕೆ ನೀಡಿದ್ದರು.</p>.<p>ವಿಜಯಪುರ ವರದಿ: ‘ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಇತ್ತೀಚೆಗೆ ಕೊಪ್ಪಳದಲ್ಲಿ ನೀಡಿದ ಹೇಳಿಕೆ ಕುರಿತು ಇಲ್ಲಿ ಮೊಕದ್ದಮೆ ದಾಖಲಾಗಿದೆ.</p>.<p>ವಿಜಯಪುರ ಮಹಾನಗರ ಪಾಲಿಕೆ ಮಾಜಿ ಸದಸ್ಯ ಮೈನುದ್ದೀನ್ ಬೀಳಗಿ ಅವರು ನಗರದ ಗಾಂಧಿಚೌಕಿ ಪೊಲೀಸ್ ಠಾಣೆಯಲ್ಲಿ ಬುಧವಾರ ಯತ್ನಾಳ ವಿರುದ್ಧ ದೂರು ದಾಖಲಿಸಿದ್ದಾರೆ.</p>.<p>ಶಾಸಕರ ಹೇಳಿಕೆ ಸಮಾಜದಲ್ಲಿ ಶಾಂತಿ, ಸೌಹಾರ್ದ ಕದಡುವಂತಿದೆ. ಕೋಮು ದ್ವೇಷಕ್ಕೆ ಕಾರಣವಾಗಿದೆ. ಅವರ ವಿರುದ್ಧ ಕಲಂ 299, 193, 353(1)(ಸಿ),353(2) ಬಿ.ಎನ್.ಎಸ್.2023 ಅಡಿಯಲ್ಲಿ ಕ್ರಮಕೈಗೊಳ್ಳುವಂತೆ ದೂರು ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>