<p><strong>ಕಲಬುರ್ಗಿ</strong>: ಬಸವ ಜಯಂತಿ ಪ್ರಯುಕ್ತ ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ಸದಸ್ಯರು ಶುಕ್ರವಾರ ಕೊರೊನಾ ಸಂಕಷ್ಟಕ್ಕೆ ಒಳಗಾದ ಬಡವರು, ಕೂಲಿಕಾರ್ಮಿಕರಿಗೆ ಅಗತ್ಯ ವಸ್ತುಗಳ ಕಿಟ್ ಮತ್ತು ಮಾಸ್ಕ್ಗಳನ್ನು ನೀಡಿದರು. </p>.<p>ಅಕಾಡೆಮಿ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಮಾತನಾಡಿ, ‘ಕೊರೊನಾದಂತಹ ಸಂಕಷ್ಟದ ಸಂದರ್ಭದಲ್ಲಿ ಕಾಯಕಯೋಗಿ ಬಸವಣ್ಣನವರ ದಾಸೋಹ ಸೂತ್ರ ನಮಗೆಲ್ಲಾ ಆದರ್ಶವಾಗಿದೆ. ಅವರ ಶರಣ ಪರಂಪರೆ ಮಹತ್ವ ಮತ್ತು ವಿಚಾರಗಳನ್ನು ಜಗತ್ತಿಗೆ ಸಾರಬೇಕಿದೆ’ ಎಂದರು.</p>.<p>ಸಮಾಜ ಸೇವಕಿ ಮಹೇಶ್ವರಿ ವಾಲಿ ಮಾತನಾಡಿ, ‘ಉಳ್ಳವರು ಇಲ್ಲದವರೊಂದಿಗೆ ಹಂಚಿಕೊಂಡು ಬದುಕುವಂಥ ಆದರ್ಶದ ಮಾರ್ಗ ಹಾಕಿ ಕೊಟ್ಟವರು ಅಣ್ಣ ಬಸವಣ್ಣ. ಎಲ್ಲರೂ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಇತರರಿಗೆ ಮಾದರಿಯಾಗಬೇಕು ಎಂದರು.</p>.<p>ಬಿಜೆಪಿ ನಾಯಕಿ ವಿಜಯಲಕ್ಷ್ಮಿ ಗೊಬ್ಬೂರಕರ್ ಅವರು ತಮ್ಮ ಮನೆಯಲ್ಲಿ ತಯಾರಿಸಿದ ಗುಣಮಟ್ಟದ ಮಾಸ್ಕ್ಗಳನ್ನು ಜನರಿಗೆ ವಿತರಿಸಿದರು.</p>.<p>ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸುರೇಶ ಡಿ.ಬಡಿಗೇರ, ಸಮಾಜ ಸೇವಕರಾದ ಸಂಗೀತಾ ಕಟ್ಟಿಮನಿ, ಶಿವಾನಂದ ಮಠಪತಿ, ಮಂಜುನಾಥ ಕಂಬಳಿಮಠ, ಶಿವಕುಮಾರ ಪಾಟೀಲ, ಬಸವರಾಜ ಆವಂಟಿ, ಸುರೇಶ ವಗ್ಗೆ, ವಿಶ್ವನಾಥ ತೊಟ್ನಳ್ಳಿ, ಭುವನೇಶ್ವರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ</strong>: ಬಸವ ಜಯಂತಿ ಪ್ರಯುಕ್ತ ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ಸದಸ್ಯರು ಶುಕ್ರವಾರ ಕೊರೊನಾ ಸಂಕಷ್ಟಕ್ಕೆ ಒಳಗಾದ ಬಡವರು, ಕೂಲಿಕಾರ್ಮಿಕರಿಗೆ ಅಗತ್ಯ ವಸ್ತುಗಳ ಕಿಟ್ ಮತ್ತು ಮಾಸ್ಕ್ಗಳನ್ನು ನೀಡಿದರು. </p>.<p>ಅಕಾಡೆಮಿ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಮಾತನಾಡಿ, ‘ಕೊರೊನಾದಂತಹ ಸಂಕಷ್ಟದ ಸಂದರ್ಭದಲ್ಲಿ ಕಾಯಕಯೋಗಿ ಬಸವಣ್ಣನವರ ದಾಸೋಹ ಸೂತ್ರ ನಮಗೆಲ್ಲಾ ಆದರ್ಶವಾಗಿದೆ. ಅವರ ಶರಣ ಪರಂಪರೆ ಮಹತ್ವ ಮತ್ತು ವಿಚಾರಗಳನ್ನು ಜಗತ್ತಿಗೆ ಸಾರಬೇಕಿದೆ’ ಎಂದರು.</p>.<p>ಸಮಾಜ ಸೇವಕಿ ಮಹೇಶ್ವರಿ ವಾಲಿ ಮಾತನಾಡಿ, ‘ಉಳ್ಳವರು ಇಲ್ಲದವರೊಂದಿಗೆ ಹಂಚಿಕೊಂಡು ಬದುಕುವಂಥ ಆದರ್ಶದ ಮಾರ್ಗ ಹಾಕಿ ಕೊಟ್ಟವರು ಅಣ್ಣ ಬಸವಣ್ಣ. ಎಲ್ಲರೂ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಇತರರಿಗೆ ಮಾದರಿಯಾಗಬೇಕು ಎಂದರು.</p>.<p>ಬಿಜೆಪಿ ನಾಯಕಿ ವಿಜಯಲಕ್ಷ್ಮಿ ಗೊಬ್ಬೂರಕರ್ ಅವರು ತಮ್ಮ ಮನೆಯಲ್ಲಿ ತಯಾರಿಸಿದ ಗುಣಮಟ್ಟದ ಮಾಸ್ಕ್ಗಳನ್ನು ಜನರಿಗೆ ವಿತರಿಸಿದರು.</p>.<p>ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸುರೇಶ ಡಿ.ಬಡಿಗೇರ, ಸಮಾಜ ಸೇವಕರಾದ ಸಂಗೀತಾ ಕಟ್ಟಿಮನಿ, ಶಿವಾನಂದ ಮಠಪತಿ, ಮಂಜುನಾಥ ಕಂಬಳಿಮಠ, ಶಿವಕುಮಾರ ಪಾಟೀಲ, ಬಸವರಾಜ ಆವಂಟಿ, ಸುರೇಶ ವಗ್ಗೆ, ವಿಶ್ವನಾಥ ತೊಟ್ನಳ್ಳಿ, ಭುವನೇಶ್ವರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>