ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೇ 3ರಂದು ಬೆಳಿಗ್ಗೆ 8ಕ್ಕೆ ಜಗತ್ ವೃತ್ತದಲ್ಲಿರುವ ವಿಶ್ವಗುರು ಬಸವಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಹಾಗೂ ಪ್ರಾರ್ಥನೆ ಸಲ್ಲಿಸುವುದರೊಂದಿಗೆ ಸಾರ್ವಜನಿಕ ಬಸವ ಜಯಂತಿಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಗುವುದು. 4ರಿಂದ 10ರವರೆಗೆ ಸಂಜೆ 6ರಿಂದ ರಾತ್ರಿ 9.30ರವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಪ್ರತಿದಿನ ಉಪನ್ಯಾಸ ನೀಡಲು ಸಾಹಿತಿ ಎಸ್.ಜಿ. ಸಿದ್ದರಾಮಯ್ಯ, ಕರವೀರಶೆಟ್ಟರು, ಪ್ರೊ. ಕೆ.ಆರ್. ದುರ್ಗಾದಾಸ್, ಪ್ರೊ.ಟಿ.ಆರ್. ಚಂದ್ರಶೇಖರ್, ಜೆ.ಎಸ್. ಪಾಟೀಲ, ಶಶಿಧರ ಭಟ್, ಅತ್ತಿವೇರಿಯ ಬಸವೇಶ್ವರಿ ಮಾತಾಜಿ ಭಾಗವಹಿಸಲಿದ್ದಾರೆ’ ಎಂದರು.