ಪತ್ರಿಕೋದ್ಯಮದ ವಿಭಾಗದ ಮುಖ್ಯಸ್ಥ ಟಿ.ವಿ.ಶಿವಾನಂದನ್ ಮಾತನಾಡಿ, ‘ಇತ್ತೀಚಿನ ವರ್ಷಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ಜಯಂತಿಗಳ ಆಚರಣೆ ಹೆಚ್ಚುತ್ತಿದೆ. ನಾವೆಲ್ಲರೂ ಬುದ್ಧ, ಬಸವ, ಅಂಬೇಡ್ಕರ್ ಅವರ ಜಯಂತಿಗಳ ಆಚರಣೆಯಲ್ಲಿ ನಿರತರಾಗುವ ಬದಲಿಗೆ, ಅವರ ತತ್ವಗಳನ್ನು ಪಾಲಿಸುವಲ್ಲಿ ನಿರತರಾಗಬೇಕು’ ಎಂದರು.