ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವಕಲ್ಯಾಣ: ಮುಖಂಡರಿಗೆ ಪಿ.ಎ. ಆಗಿದ್ದ ಶಿಕ್ಷಕ; ಈಗ ಶಾಸಕ ಶರಣು ಸಲಗರ

Last Updated 2 ಮೇ 2021, 8:07 IST
ಅಕ್ಷರ ಗಾತ್ರ

ಕಲಬುರ್ಗಿ: ಶಾಸಕರ ಆಪ್ತಸಹಾಯಕರಾಗಿ ವಿಧಾನಸೌಧ ಸುತ್ತಿದ್ದ ಶರಣು ಸಲಗರ ಈಗ ಸ್ವತಃ ಶಾಸಕ. ಬಸವಕಲ್ಯಾಣ ಕ್ಷೇತ್ರಕ್ಕೆ ವಲಸೆ ಹೋಗಿ ಎರಡೇ ವರ್ಷದಲ್ಲಿ ಅಲ್ಲಿ ಬೀಡುಬಿಟ್ಟಿದ್ದಲ್ಲದೇ 16 ಜನ ಸ್ಥಳೀಯ ಘಟಾನುಘಟಿ ಆಕಾಂಕ್ಷಿಗಳನ್ನು ಹಿಂದಿಕ್ಕಿ ಬಿಜೆಪಿ ಟಿಕೆಟ್‌ ಗಿಟ್ಟಿಸಿಕೊಂಡರು. ಈಗ ಶಾಸಕರಾಗಿ ಆಯ್ಕೆಯಾಗುವ ಮೂಲಕ ತಮ್ಮ ಮಹಾತ್ವಾಕಾಂಕ್ಷೆ ಈಡೇರಿಸಿಕೊಂಡಿದ್ದಾರೆ.

ಕಲಬುರ್ಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ವಿ.ಕೆ.ಸಲಗರ ಗ್ರಾಮದಲ್ಲಿ ಜನಿಸಿರುವ ಶರಣು ಸಲಗರ ಎಂ.ಎಸ್ಸಿ ಎಂ.ಇಡಿ ಓದಿದ್ದಾರೆ. 2002ರಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ನೇಮಕ. ಅದೇ ವೇಳೆ ಶಾಸಕರಾಗಿದ್ದ ರೇವುನಾಯಕ ಬೆಳಮಗಿ ಅವರ ಆಪ್ತ ಸಹಾಯಕರಾಗಿದ್ದರು. 2004ರಿಂದ 2011ರ ವರೆಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿದ್ದವರಿಗೆ ಹಾಗೂ 2013ರಲ್ಲಿ ಜೇವರ್ಗಿ ಶಾಸಕ ಡಾ.ಅಜಯ ಸಿಂಗ್‌ ಅವರಿಗೆ ಆಪ್ತಸಹಾಯಕರಾಗಿದ್ದರು.

2011ರಲ್ಲಿ ಪ್ರೌಢಶಾಲೆ ಶಿಕ್ಷಕರಾಗಿ ಪದೋನ್ನತಿ ಹೊಂದಿದರು. 2014ರಲ್ಲಿ ಶಿಕ್ಷಕ ಹುದ್ದೆಗೆ ರಾಜೀನಾಮೆ ನೀಡಿ ಕಾಂಗ್ರೆಸ್‌ ಸೇರಿದರು. 2016ರಲ್ಲಿ ಆಳಂದ ತಾಲ್ಲೂಕಿನ ಚಿಂಚನಸೂರ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಟಿಕೆಟ್‌ ಸಿಗಲಿಲ್ಲ ಎಂದು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದರು. ಕಲಬುರ್ಗಿ ಗ್ರಾಮೀಣ ಮಂಡಲದ ಬಿಜೆಪಿ ಅಧ್ಯಕ್ಷರೂ ಆದರು.

ಕಲಬುರ್ಗಿ ಗ್ರಾಮೀಣ ಕ್ಷೇತ್ರದ ಬಿಜೆಪಿಯಲ್ಲಿ ವೈಮನಸ್ಸು ಉಂಟಾಗಿದ್ದರಿಂದ ಮತ್ತು ಈ ಕ್ಷೇತ್ರ ಪರಿಶಿಷ್ಟ ಜಾತಿಗೆ ಮೀಸಲಾಗಿರುವುದರಿಂದ ಇಲ್ಲಿ ತಮಗೆ (ಇವರು ವೀರಶೈವ ಲಿಂಗಾಯತ) ರಾಜಕೀಯ ಭವಿಷ್ಯ ಇಲ್ಲ ಎಂಬ ಕಾರಣಕ್ಕೆಬಸವಕಲ್ಯಾಣ ಕ್ಷೇತ್ರದಲ್ಲಿ ಪಕ್ಷದ ಚಟುವಟಿಕೆಯಲ್ಲಿ ತೊಡಗಿದರು.ಅವರ ಪತ್ನಿ ಸಾವಿತ್ರಿ ಅವರು ಸಮಾಜಕಲ್ಯಾಣ ಇಲಾಖೆಯ ವಸತಿ ನಿಲಯದ ಮೇಲ್ವಿಚಾರಕಿಯಾಗಿದ್ದರು. 2016ರ ಕೆಎಎಸ್ ಪರೀಕ್ಷೆಯಲ್ಲಿ ಪಾಸಾಗಿ ತಹಶೀಲ್ದಾರರಾದರು. ಸುಮಾರು ಎರಡು ವರ್ಷಗಳಿಂದ ಬಸವಕಲ್ಯಾಣತಹಶೀಲ್ದಾರರಾಗಿದ್ದ ಅವರು ಚುನಾವಣೆ ಘೋಷಣೆಯಾಗುತ್ತಿದ್ದಂತೆ ವರ್ಗಾವಣೆಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT