<p><strong>ಕಲಬುರ್ಗಿ</strong>: ‘ಈಗಾಗಲೇ ಜಾರಿಯಲ್ಲಿರುವ ರಾತ್ರಿ ಕರ್ಫ್ಯೂ ಜತೆಗೆ ಜನತಾ ಕರ್ಫ್ಯೂ ಹಾಗೂ ವಾರಾಂತ್ಯ ಲಾಕ್ಡೌನ್ ಮಾಡುವ ಕುರಿತು ಏ. 18ರಂದು ನಡೆಯಲಿರುವ ಸರ್ವಪಕ್ಷಗಳ ಸಭೆಯಲ್ಲಿ ಚರ್ಚಿಸಿ, ನಿರ್ಧರಿಸಲಾಗುವುದು’ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ಬಸವಕಲ್ಯಾಣ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿ, ಬೆಂಗಳೂರಿಗೆ ಮರಳುವ ಸಂದರ್ಭ ನಗರದಲ್ಲಿ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.<br /><br />‘ಏಕಾಏಕಿ ಲಾಕ್ಡೌನ್ ಅಥವಾ ವಾರಾಂತ್ಯ ಲಾಕ್ಡೌನ್ ಘೋಷಣೆ ಮಾಡುವುದಿಲ್ಲ. ಇದಕ್ಕೆ ಎಲ್ಲ ಪಕ್ಷಗಳ ಮುಖಂಡರ ಸಲಹೆ, ಸೂಚನೆಗಳೂ ಬೇಕಾಗಿವೆ. ಹಾಗಾಗಿ, ಸಭೆಯ ಬಳಿಕವೇ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.</p>.<p>‘ಬೆಂಗಳೂರು ನಗರದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಅತಿ ಹೆಚ್ಚುತ್ತಿದ್ದು ಕಳವಳಕಾರಿ. ಇದನ್ನು ನಿಯಂತ್ರಣಕ್ಕೆ ತರಲು ಇನ್ನಷ್ಟು ಕಠಿಣ ಕ್ರಮ ಜಾರಿಗೊಳಿಸುವುದು ಅನಿವಾರ್ಯ. ಈಗಾಗಲೇ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ’ ಎಂದರು.</p>.<p>‘ಸಾಂಕ್ರಾಮಿಕ ನಿಯಂತ್ರಣಕ್ಕಾಗಿ ಮಹಾರಾಷ್ಟ್ರ ಮಾದರಿಯ ಕ್ರಮಗಳನ್ನೇ ಅನುಸರಿಸಲು ಚಿಂತನೆ ನಡೆದಿದೆ. ಲಾಕ್ಡೌನ್ ಆಗಲಿ ಬಿಡಲಿ; ನೀವು ಕಠಿಣ ಕ್ರಮ ಕೈಗೊಳ್ಳಿ ಎಂದು ಪೊಲೀಸ್ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ’ ಎಂದೂ ಬೊಮ್ಮಾಯಿ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ</strong>: ‘ಈಗಾಗಲೇ ಜಾರಿಯಲ್ಲಿರುವ ರಾತ್ರಿ ಕರ್ಫ್ಯೂ ಜತೆಗೆ ಜನತಾ ಕರ್ಫ್ಯೂ ಹಾಗೂ ವಾರಾಂತ್ಯ ಲಾಕ್ಡೌನ್ ಮಾಡುವ ಕುರಿತು ಏ. 18ರಂದು ನಡೆಯಲಿರುವ ಸರ್ವಪಕ್ಷಗಳ ಸಭೆಯಲ್ಲಿ ಚರ್ಚಿಸಿ, ನಿರ್ಧರಿಸಲಾಗುವುದು’ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ಬಸವಕಲ್ಯಾಣ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿ, ಬೆಂಗಳೂರಿಗೆ ಮರಳುವ ಸಂದರ್ಭ ನಗರದಲ್ಲಿ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.<br /><br />‘ಏಕಾಏಕಿ ಲಾಕ್ಡೌನ್ ಅಥವಾ ವಾರಾಂತ್ಯ ಲಾಕ್ಡೌನ್ ಘೋಷಣೆ ಮಾಡುವುದಿಲ್ಲ. ಇದಕ್ಕೆ ಎಲ್ಲ ಪಕ್ಷಗಳ ಮುಖಂಡರ ಸಲಹೆ, ಸೂಚನೆಗಳೂ ಬೇಕಾಗಿವೆ. ಹಾಗಾಗಿ, ಸಭೆಯ ಬಳಿಕವೇ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.</p>.<p>‘ಬೆಂಗಳೂರು ನಗರದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಅತಿ ಹೆಚ್ಚುತ್ತಿದ್ದು ಕಳವಳಕಾರಿ. ಇದನ್ನು ನಿಯಂತ್ರಣಕ್ಕೆ ತರಲು ಇನ್ನಷ್ಟು ಕಠಿಣ ಕ್ರಮ ಜಾರಿಗೊಳಿಸುವುದು ಅನಿವಾರ್ಯ. ಈಗಾಗಲೇ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ’ ಎಂದರು.</p>.<p>‘ಸಾಂಕ್ರಾಮಿಕ ನಿಯಂತ್ರಣಕ್ಕಾಗಿ ಮಹಾರಾಷ್ಟ್ರ ಮಾದರಿಯ ಕ್ರಮಗಳನ್ನೇ ಅನುಸರಿಸಲು ಚಿಂತನೆ ನಡೆದಿದೆ. ಲಾಕ್ಡೌನ್ ಆಗಲಿ ಬಿಡಲಿ; ನೀವು ಕಠಿಣ ಕ್ರಮ ಕೈಗೊಳ್ಳಿ ಎಂದು ಪೊಲೀಸ್ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ’ ಎಂದೂ ಬೊಮ್ಮಾಯಿ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>