‘ಆ ಜನಾಂಗಕ್ಕೆ(ಬಂಜಾರ ಸಮುದಾಯ) ಏನೂ ಗೊತ್ತಿಲ್ಲ. ಕಾಂಗ್ರೆಸ್ ನಾಯಕರು ಹಿಂದಿನ ದಿನ ಅವರನ್ನು ತಪ್ಪು ದಾರಿಗೆ ಎಳೆದು, ಎಸ್ಸಿ ಪಟ್ಟಿಯಿಂದ ತೆಗೆಯುತ್ತಾರೆ ಎಂದು ಸುಳ್ಳು ಹೇಳಿ ಪ್ರಚೋದನೆ ಮಾಡಿದ್ದಾರೆ. ರಾತ್ರಿಯೇ ಕಾಂಗ್ರೆಸ್ ಸಭೆ ನಡೆಸಿ, ಯೋಜನೆ ಹಾಕಿಕೊಂಡು ವ್ಯವಸ್ಥಿತವಾಗಿ ಮಾಡಿರುವುದು. ಸಾಕ್ಷಿ ಸಮೇತವಾಗಿ ಹೇಳುತ್ತಿದ್ದೇನೆ. ಸುಳ್ಳು ಹೇಳುವುದನ್ನು ಡಿ.ಕೆ. ಶಿವಕುಮಾರ ಅವರು ಬಿಡಬೇಕು’ ಎಂದರು.